ಗೆದ್ದ ಅಭ್ಯರ್ಥಿಗಳು ತಮ್ಮ ಗ್ರಾಮಗಳಲ್ಲಿ ವಿಜಯೋತ್ಸವ ಆಚರಿಸಿದರು. ಸಂಜೆ 6 ಗಂಟೆಯವರೆಗೂ ಮತ ಏಣಿಕೆ ಕೇಂದ್ರದಲ್ಲಿ ಜನರು ಕಿಕ್ಕಿರಿದು ನಿಂತಿದ್ದರು. ಜನರನ್ನು ಚದುರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟರು. ಡಿವೈಎಸ್ಪಿ ಸಿಪಿಐ ಮಹಾದೇವ ಪಂಚಮುಖಿ, ಪಿಎಸ್ಐ ವಿಶ್ವನಾಥ ಮುದರೆಡ್ಡಿ, ಅಪರಾಧ ವಿಭಾಗದ ಪಿಎಸ್ಐ ಅಶೋಕ ಪಾಟೀಲ ಮತ ಕೇಂದ್ರದ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.