<p><strong>ಆಳಂದ</strong>: ತಾಲ್ಲೂಕಿನ ತಲೆಕುಣಿ ಗ್ರಾಮದಲ್ಲಿನ ತೋಟದ ಬಾವಿಗೆ ಬಿದ್ದ ಎಮ್ಮೆಯನ್ನು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿದ ಘಟನೆ ಭಾನುವಾರ ನಡೆದಿದೆ.</p>.<p>ಶಿವಲಿಂಗಪ್ಪ ಹಣಮಂತ ತಡಕಲೆ (55) ನೀರಿನಲ್ಲಿ ಮುಳುಗಿದವರು. ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. </p>.<p>ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ರಾತ್ರಿವರೆಗೂ ಪ್ರಯತ್ನಿಸಿದರೂ ಪತ್ತೆಯಾಗಲಿಲ್ಲ.</p>.<p>ಘಟನೆ: ಗ್ರಾಮದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಹೊಲದಲ್ಲಿ ಕಾರ್ಮಿಕ ಶಿವಲಿಂಗಪ್ಪ ಅವರ ಪತ್ನಿ ಎಮ್ಮೆ ಮೇಯಿಸಲು ಹೋಗಿದ್ದರು. ಈ ವೇಳೆ ಎಮ್ಮೆ ನೀರು ಕುಡಿಯಲು ಹೋಗಿ ಆಯತಪ್ಪಿ ಬಾವಿಗೆ ಬಿದ್ದಿದೆ. ಹೊರಬರದೆ ಇದ್ದಾಗ ಪತ್ನಿ ಕೆಲಸಕ್ಕೆ ಹೋಗಿದ್ದ ಪತಿಗೆ ಕರೆ ಮಾಡಿ ಕರೆಯಿಸಿದ್ದಾರೆ.</p>.<p>ಬಾವಿಯಲ್ಲಿ ಬಿದ್ದ ಎಮ್ಮೆಯನ್ನು ರಕ್ಷಿಸಲು ನೀರಿಗೆ ಹಾರಿದ ಶಿವಲಿಂಗಪ್ಪ ಮುಳುಗಿದ್ದಾರೆ. ಗಾಬರಿಗೊಂಡ ಪತ್ನಿ ಸುತ್ತಲಿನ ರೈತರು, ಗ್ರಾಮಸ್ಥರ ಗಮನಕ್ಕೆ ತಂದಾಗ ಜನರು ಜಮಾಯಿಸಿದ್ದಾರೆ. ಎಮ್ಮೆ ಬಾವಿಯಿಂದ ಹೊರಬಂದಿದೆ. ಆದರೆ, ಕೂಲಿ ಕಾರ್ಮಿಕ ಪತ್ತೆಯಾಗಿಲ್ಲ.</p>.<p>ಗ್ರಾಮಸ್ಥರು ಹಾಗೂ ಆಳಂದ ಅಗ್ನಿಶಾಮಕ ಸಿಬ್ಬಂದಿ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಲಿಲ್ಲ. ಜಿಟಿಜಿಟಿ ಮಳೆ ಹಾಗೂ ಕತ್ತಲು ಆವರಿಸಿದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಸೋಮವಾರ ಮತ್ತೆ ಕಾರ್ಯಾಚರಣೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ.</p>.<p>ಕುಟುಂಬಕ್ಕೆ ಶಿವಲಿಂಗಪ್ಪ ಅವರು ಆಸರೆಯಾಗಿದ್ದರು. ಕೂಲಿ ಕೆಲಸ ಹಾಗೂ ಹೈನುಗಾರಿಕೆ ಮಾಡಿಕೊಂಡು ಬದುಕಿದ್ದ ಅವರು ನೀರು ಪಾಲಾಗಿದ್ದರಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಕುಟುಂಬಸ್ಥರು ಹಾಗೂ ಗ್ರಾಮದ ಮಹಿಳೆಯರ ಆಕ್ರಂದನ ಮುಗಿಲು ಮುಟ್ಟಿದೆ.</p>.<p class="Subhead">ಪರಿಹಾರಕ್ಕೆ ಒತ್ತಾಯ: ‘ಶಿವಲಿಂಗಪ್ಪ ತಡಕಲೆ ಅವರ ಕುಟುಂಬಕ್ಕೆ ದೊಡ್ಡ ಆಪತ್ತು ಬಂದಿದೆ. ಕುಟುಂಬದಲ್ಲಿ ದುಡಿಯುವ ಏಕೈಕ ವ್ಯಕ್ತಿ ಅವರಾಗಿದ್ದರು. ಆದ ಕಾರಣ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲಾಧಿಕಾರಿ ಮಾನವೀಯ ದೃಷ್ಟಿಯಿಂದ ₹5 ಲಕ್ಷ ಪರಿಹಾರ ನೀಡಬೇಕು’ ಎಂದು ಗ್ರಾ.ಪಂ ಅಧ್ಯಕ್ಷ ಮಹಿಬೂಬ ಶೇಖ್, ಸದಸ್ಯ ಶಿವರಾಜ ಪೂಜಾರಿ, ಪ್ರಗತಿಪರ ರೈತ ಸುರೇಂದ್ರ ಪಾಟೀಲ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ</strong>: ತಾಲ್ಲೂಕಿನ ತಲೆಕುಣಿ ಗ್ರಾಮದಲ್ಲಿನ ತೋಟದ ಬಾವಿಗೆ ಬಿದ್ದ ಎಮ್ಮೆಯನ್ನು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿದ ಘಟನೆ ಭಾನುವಾರ ನಡೆದಿದೆ.</p>.<p>ಶಿವಲಿಂಗಪ್ಪ ಹಣಮಂತ ತಡಕಲೆ (55) ನೀರಿನಲ್ಲಿ ಮುಳುಗಿದವರು. ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. </p>.<p>ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ರಾತ್ರಿವರೆಗೂ ಪ್ರಯತ್ನಿಸಿದರೂ ಪತ್ತೆಯಾಗಲಿಲ್ಲ.</p>.<p>ಘಟನೆ: ಗ್ರಾಮದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಹೊಲದಲ್ಲಿ ಕಾರ್ಮಿಕ ಶಿವಲಿಂಗಪ್ಪ ಅವರ ಪತ್ನಿ ಎಮ್ಮೆ ಮೇಯಿಸಲು ಹೋಗಿದ್ದರು. ಈ ವೇಳೆ ಎಮ್ಮೆ ನೀರು ಕುಡಿಯಲು ಹೋಗಿ ಆಯತಪ್ಪಿ ಬಾವಿಗೆ ಬಿದ್ದಿದೆ. ಹೊರಬರದೆ ಇದ್ದಾಗ ಪತ್ನಿ ಕೆಲಸಕ್ಕೆ ಹೋಗಿದ್ದ ಪತಿಗೆ ಕರೆ ಮಾಡಿ ಕರೆಯಿಸಿದ್ದಾರೆ.</p>.<p>ಬಾವಿಯಲ್ಲಿ ಬಿದ್ದ ಎಮ್ಮೆಯನ್ನು ರಕ್ಷಿಸಲು ನೀರಿಗೆ ಹಾರಿದ ಶಿವಲಿಂಗಪ್ಪ ಮುಳುಗಿದ್ದಾರೆ. ಗಾಬರಿಗೊಂಡ ಪತ್ನಿ ಸುತ್ತಲಿನ ರೈತರು, ಗ್ರಾಮಸ್ಥರ ಗಮನಕ್ಕೆ ತಂದಾಗ ಜನರು ಜಮಾಯಿಸಿದ್ದಾರೆ. ಎಮ್ಮೆ ಬಾವಿಯಿಂದ ಹೊರಬಂದಿದೆ. ಆದರೆ, ಕೂಲಿ ಕಾರ್ಮಿಕ ಪತ್ತೆಯಾಗಿಲ್ಲ.</p>.<p>ಗ್ರಾಮಸ್ಥರು ಹಾಗೂ ಆಳಂದ ಅಗ್ನಿಶಾಮಕ ಸಿಬ್ಬಂದಿ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಲಿಲ್ಲ. ಜಿಟಿಜಿಟಿ ಮಳೆ ಹಾಗೂ ಕತ್ತಲು ಆವರಿಸಿದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಸೋಮವಾರ ಮತ್ತೆ ಕಾರ್ಯಾಚರಣೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ.</p>.<p>ಕುಟುಂಬಕ್ಕೆ ಶಿವಲಿಂಗಪ್ಪ ಅವರು ಆಸರೆಯಾಗಿದ್ದರು. ಕೂಲಿ ಕೆಲಸ ಹಾಗೂ ಹೈನುಗಾರಿಕೆ ಮಾಡಿಕೊಂಡು ಬದುಕಿದ್ದ ಅವರು ನೀರು ಪಾಲಾಗಿದ್ದರಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಕುಟುಂಬಸ್ಥರು ಹಾಗೂ ಗ್ರಾಮದ ಮಹಿಳೆಯರ ಆಕ್ರಂದನ ಮುಗಿಲು ಮುಟ್ಟಿದೆ.</p>.<p class="Subhead">ಪರಿಹಾರಕ್ಕೆ ಒತ್ತಾಯ: ‘ಶಿವಲಿಂಗಪ್ಪ ತಡಕಲೆ ಅವರ ಕುಟುಂಬಕ್ಕೆ ದೊಡ್ಡ ಆಪತ್ತು ಬಂದಿದೆ. ಕುಟುಂಬದಲ್ಲಿ ದುಡಿಯುವ ಏಕೈಕ ವ್ಯಕ್ತಿ ಅವರಾಗಿದ್ದರು. ಆದ ಕಾರಣ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲಾಧಿಕಾರಿ ಮಾನವೀಯ ದೃಷ್ಟಿಯಿಂದ ₹5 ಲಕ್ಷ ಪರಿಹಾರ ನೀಡಬೇಕು’ ಎಂದು ಗ್ರಾ.ಪಂ ಅಧ್ಯಕ್ಷ ಮಹಿಬೂಬ ಶೇಖ್, ಸದಸ್ಯ ಶಿವರಾಜ ಪೂಜಾರಿ, ಪ್ರಗತಿಪರ ರೈತ ಸುರೇಂದ್ರ ಪಾಟೀಲ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>