<p><strong>ಕಲಬುರ್ಗಿ:</strong> ಹೆಚ್ಚುವರಿ ಶಿಕ್ಷಣ ಆಯುಕ್ತಾಲಯದ ಸಹಯೋಗದಲ್ಲಿಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ವ್ಯಾಪ್ತಿಯ 33 ತಾಲ್ಲೂಕು ಕೇಂದ್ರಗಳಲ್ಲಿ ಟಿಇಟಿ ಗೆ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಕೆಕೆಆರ್ಡಿಬಿ ಕಾರ್ಯದರ್ಶಿ ಸುಬೋಧ ಯಾದವ್ ತಿಳಿಸಿದರು.</p>.<p>ಇಲ್ಲಿನ ಬಿ.ಇಡಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಟಿಇಟಿ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>371 (ಜೆ) ಅಡಿ ಇಲ್ಲಿನ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಇರುವುದರಿಂದ ಇಲ್ಲಿನವರು ಶಿಕ್ಷಕರ ಹುದ್ದೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗಲು ತರಬೇತಿ ನೀಡಲಾಗುತ್ತದೆ ಎಂದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ನಳಿನ್ ಅತುಲ್ ಮಾತನಾಡಿದರು.</p>.<p>ತರಬೇತಿಯಲ್ಲಿ ಭಾವಗಹಿಸಿದ್ದ ವಿದ್ಯಾರ್ಥಿಗಳು ಇಂಗ್ಲಿಷ್, ವಿಜ್ಞಾನ, ಗಣಿತ ವಿಷಯದೊಂದಿಗೆ ಮನಃಶಾಸ್ತ್ರ ವಿಷಯದ ತರಬೇತಿಯೂ ಅಗತ್ಯವಿದೆ ಎಂದು ಮನವಿ ಮಾಡಿಕೊಂಡರು.</p>.<p>ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಹನಿರ್ದೇಶಕ ವಿಜಯಕುಮಾರ, ಹೆಚ್ಚುವರಿ ಶಿಕ್ಷಣ ಆಯುಕ್ತಾಲಯದ ನಿರ್ದೇಶಕ ಟಿ. ನಾರಾಯಣಗೌಡ, ಶಿಕ್ಷಣ ತಜ್ಞ ಎನ್.ಬಿ.ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಹೆಚ್ಚುವರಿ ಶಿಕ್ಷಣ ಆಯುಕ್ತಾಲಯದ ಸಹಯೋಗದಲ್ಲಿಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ವ್ಯಾಪ್ತಿಯ 33 ತಾಲ್ಲೂಕು ಕೇಂದ್ರಗಳಲ್ಲಿ ಟಿಇಟಿ ಗೆ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಕೆಕೆಆರ್ಡಿಬಿ ಕಾರ್ಯದರ್ಶಿ ಸುಬೋಧ ಯಾದವ್ ತಿಳಿಸಿದರು.</p>.<p>ಇಲ್ಲಿನ ಬಿ.ಇಡಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಟಿಇಟಿ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>371 (ಜೆ) ಅಡಿ ಇಲ್ಲಿನ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಇರುವುದರಿಂದ ಇಲ್ಲಿನವರು ಶಿಕ್ಷಕರ ಹುದ್ದೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗಲು ತರಬೇತಿ ನೀಡಲಾಗುತ್ತದೆ ಎಂದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ನಳಿನ್ ಅತುಲ್ ಮಾತನಾಡಿದರು.</p>.<p>ತರಬೇತಿಯಲ್ಲಿ ಭಾವಗಹಿಸಿದ್ದ ವಿದ್ಯಾರ್ಥಿಗಳು ಇಂಗ್ಲಿಷ್, ವಿಜ್ಞಾನ, ಗಣಿತ ವಿಷಯದೊಂದಿಗೆ ಮನಃಶಾಸ್ತ್ರ ವಿಷಯದ ತರಬೇತಿಯೂ ಅಗತ್ಯವಿದೆ ಎಂದು ಮನವಿ ಮಾಡಿಕೊಂಡರು.</p>.<p>ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಹನಿರ್ದೇಶಕ ವಿಜಯಕುಮಾರ, ಹೆಚ್ಚುವರಿ ಶಿಕ್ಷಣ ಆಯುಕ್ತಾಲಯದ ನಿರ್ದೇಶಕ ಟಿ. ನಾರಾಯಣಗೌಡ, ಶಿಕ್ಷಣ ತಜ್ಞ ಎನ್.ಬಿ.ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>