ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಜನಪ್ರತಿನಿಧಿಗಳ ತರಬೇತಿ ಕಟ್ಟಡ ಲೋಕಾರ್ಪಣೆ

ಬೆಂಗಳೂರಿನಿಂದ ಆನ್‌ಲೈನ್‌ ಮೂಲಕ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Last Updated 24 ಸೆಪ್ಟೆಂಬರ್ 2021, 4:52 IST
ಅಕ್ಷರ ಗಾತ್ರ

ಕಲಬುರ್ಗಿ:ಸಮೀಪದ ಕೆಸರಟಗಿ ಗ್ರಾಮದಲ್ಲಿ ನಿರ್ಮಿಸಿದ ಅಬ್ದುಲ್ ನಜೀರ್‌ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಂಗಳೂರಿನಿಂದ ಆನ್‌ಲೈನ್‌ನಲ್ಲಿ ಉದ್ಘಾಟನೆ ಮಾಡಿದರು.

ಶಾಸಕ ಬಸವರಾಜ ಮತ್ತಿಮೂಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಮಯಕ್ಕೆ ಕೆಸರಟಗಿಯಲ್ಲಿಸಂಸ್ಥೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ನಾಗರಾಜ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಪ್ರಭಾರಿ ಅಧೀಕ್ಷಕ ಎಂಜಿನಿಯರ್‌ ಶೇಖ್‌ ಸಲೀಮುದ್ದಿನ್‌, ಸಹಾಯಕ ಕಾರ್ಯನಿರ್ವಾಕ ಎಂಜಿನಿಯರ್‌ ಜಾಫರ್‌ ಅಹ್ಮದ್‌ ಹಾಗೂ ಸಿಬ್ಬಂದಿ ವರ್ಗದವರು ಸಾಂಕೇತಿಕವಾಗಿ ಕಟ್ಟಡಕ್ಕೆ ಪೂಜೆ ಸಲ್ಲಿಸಿದರು.

ಯಾರಿಗೆ ಪ್ರಯೋಜನ?: ಕಲಬುರ್ಗಿ ಪ್ರಾದೇಶಿಕ ವ್ಯಾಪ‍್ತಿಗೆ ಬರುವ ಎಲ್ಲ ಆರೂ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ನೀಡುವುದು ಈ ಸಂಸ್ಥೆಯ ಕೆಲಸ. ಈ ಮುಂಚೆ ಇಂಥ ತರಬೇತಿಗಾಗಿ ಜನಪ್ರತಿನಿಧಿಗಳನ್ನು ಮೈಸೂರಿನಲ್ಲಿರುವ ಸಂಸ್ಥೆಯ ಮುಖ್ಯ ಕಚೇರಿಗೆ ಕಳುಹಿಸಲಾಗುತ್ತಿತ್ತು. ಇದಕ್ಕಾಗಿಯೇ ಈಗ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ.

ಕಟ್ಟಡದ ವಿಶೇಷತೆ ಏನು?: ಸರಿಯಾಗಿ 3.5 ಎಕರೆ ವಿಸ್ತೀರ್ಣದಲ್ಲಿ43525 ಚದರ್‌ ಅಡಿ ಅಳತೆಯ ಕಟ್ಟಡವಿದೆ. ₹ 9 ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ. ₹ 7.5 ಕೋಟಿ ವೆಚ್ಚದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ₹ 1.5 ಕೋಟಿ ವೆಚ್ಚದಲ್ಲಿ ಜಿಲ್ಲಾ ಪಂಚಾಯತ್ ಸಂಪನ್ಮೂಲ ತರಬೇತಿ ಕೇಂದ್ರವನ್ನು ಈ ಒಂದೇ ಕಟ್ಟಡದಲ್ಲಿ ನಿರ್ಮಿಸಲಾಗಿದೆ.

ನೆಲ ಮಹಡಿಯಲ್ಲಿ ಗ್ರಂಥಾಲಯ, ಆಡಳಿತ ಕೋಣೆ, 5 ಸಾಮಾನ್ಯ ಕೋಣೆ, ಅಡುಗೆ ಕೋಣೆ, ಶೌಚಾಲಯಗಳಿವೆ. ಮೊದಲನೇ ಮಹಡಿಯಲ್ಲಿ 2 ತರಬೇತಿ ಸಭಾಂಗಣ, 2 ಅತಿಥಿಗೃಹ, 12 ಸಾಮಾನ್ಯ ಕೋಣೆ ಮತ್ತು ಸಾಮಾನ್ಯ ಶೌಚಾಲಯಗಳಿವೆ. ಎರಡನೇ ಮಹಡಿಯಲಿ 100 ಜನ ತಂಗುವಷ್ಟು ಸಾಮರ್ಥ್ಯದ 2 ಡಾರ್ಮಿಟರಿ, 12 ಸಾಮಾನ್ಯ ಕೋಣೆ, ಕಂಪ್ಯೂಟರ್ ತರಬೇತಿ ಕೇಂದ್ರವಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT