<p><strong>ಕಲಬುರಗಿ</strong>: ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗಾಂಜಾ ಸಾಗಣೆ ಮಾಡಿದ ಆರೋಪದಡಿ ಜೈಲಿನ ಕಸಗುಡಿಸುವ ಮಹಿಳಾ ಸಿಬ್ಬಂದಿಯನ್ನು ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಕಾರಾಗೃಹದ ಗ್ರೂಪ್ ‘ಡಿ’ ಸಿಬ್ಬಂದಿ ಪದ್ಮಾವತಿ ದೇವೇಂದ್ರಪ್ಪ ಹೊಸಮನಿ ಬಂಧಿತ ಆರೋಪಿ. ಬೀದರ್ನಿಂದ ವರ್ಗಾವಣೆಯಾಗಿ ಬಂದಿದ್ದ ಪದ್ಮಾವತಿ, ಕಳೆದ ಒಂದೂವರೆ ವರ್ಷದಿಂದ ಕಲಬುರಗಿ ಕಾರಾಗೃಹದಲ್ಲಿ ಕಸಗುಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾರಾಗೃಹದ ಪ್ರವೇಶ ದ್ವಾರದಲ್ಲಿ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಗೆ ಪದ್ಮಾವತಿ ಅವರ ಬ್ಯಾಗ್ ತಪಾಸಣೆ ಮಾಡುವಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡುಬಂತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಕೇಳಿದಾಗ, ‘ಏನೂ ಇಲ್ಲ’ ಎಂದ ಪದ್ಮಾವತಿ, ಅದನ್ನು ಹ್ಯಾಂಡ್ಬ್ಯಾಗ್ನಲ್ಲಿ ಹಾಕಿಕೊಂಡು ಒಳ ಹೋಗುತ್ತಿದ್ದರು. ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ 100 ಗ್ರಾಂ. ಗಾಂಜಾ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಜೈಲಿನಲ್ಲಿರುವ ನಾಗರಾಜ ಎಂಬುವವರಿಗೆ ಕೊಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಪದ್ಮಾವತಿಯನ್ನು ವಶಕ್ಕೆ ಪಡೆದು, ನಾಗರಾಜ ಅವರ ಮಾಹಿತಿ ಕಲೆಹಾಕಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಗಾಂಜಾ ಸಾಗಣೆ ಮಾಡಿದ ಆರೋಪದಡಿ ಜೈಲಿನ ಕಸಗುಡಿಸುವ ಮಹಿಳಾ ಸಿಬ್ಬಂದಿಯನ್ನು ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಕಾರಾಗೃಹದ ಗ್ರೂಪ್ ‘ಡಿ’ ಸಿಬ್ಬಂದಿ ಪದ್ಮಾವತಿ ದೇವೇಂದ್ರಪ್ಪ ಹೊಸಮನಿ ಬಂಧಿತ ಆರೋಪಿ. ಬೀದರ್ನಿಂದ ವರ್ಗಾವಣೆಯಾಗಿ ಬಂದಿದ್ದ ಪದ್ಮಾವತಿ, ಕಳೆದ ಒಂದೂವರೆ ವರ್ಷದಿಂದ ಕಲಬುರಗಿ ಕಾರಾಗೃಹದಲ್ಲಿ ಕಸಗುಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾರಾಗೃಹದ ಪ್ರವೇಶ ದ್ವಾರದಲ್ಲಿ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಗೆ ಪದ್ಮಾವತಿ ಅವರ ಬ್ಯಾಗ್ ತಪಾಸಣೆ ಮಾಡುವಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡುಬಂತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಕೇಳಿದಾಗ, ‘ಏನೂ ಇಲ್ಲ’ ಎಂದ ಪದ್ಮಾವತಿ, ಅದನ್ನು ಹ್ಯಾಂಡ್ಬ್ಯಾಗ್ನಲ್ಲಿ ಹಾಕಿಕೊಂಡು ಒಳ ಹೋಗುತ್ತಿದ್ದರು. ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ 100 ಗ್ರಾಂ. ಗಾಂಜಾ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಜೈಲಿನಲ್ಲಿರುವ ನಾಗರಾಜ ಎಂಬುವವರಿಗೆ ಕೊಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಪದ್ಮಾವತಿಯನ್ನು ವಶಕ್ಕೆ ಪಡೆದು, ನಾಗರಾಜ ಅವರ ಮಾಹಿತಿ ಕಲೆಹಾಕಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>