ಮೈಸೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣವನ್ನು ನಿಷೇಧಿಸಲಾಗಿದೆ ಎಂದು ಡಿಸಿಎಫ್ ಏಡುಕುಂಡಲ ತಿಳಿಸಿದ್ದಾರೆ.
ಬೇಸಿಗೆ ಬಿಸಿಲು ಹೆಚ್ಚುತ್ತಿರುವುದರಿಂದ ಕಾಳ್ಗಿಚ್ಚು ಸಂಭವಿಸುವ ಅಪಾಯ ಇದೆ. ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.
ಭಾನುವಾರವಷ್ಟೇ ತಮಿಳುನಾಡಿನ ಥೇಣಿ ಜಿಲ್ಲೆಯ ಪಶ್ಚಿಮ ಘಟ್ಟದ ಕುರುಂಗಣಿ ಪರ್ವತ ಶ್ರೇಣಿಯಲ್ಲಿ ಚಾರಣಕ್ಕೆ ತೆರಳಿದ್ದ 10 ಮಂದಿ ಕಾಳ್ಗಿಚ್ಚಿನಿಂದ ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.