ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಮಾನ ನಿಲ್ದಾಣ ಕಾಮಗಾರಿಗೆ ನಾನು ಶಂಕು ಸ್ಥಾಪನೆ ನೆರವೇರಿಸಿದ್ದೇನೆ. ಅಲ್ಲದೆ, ಈಚೆಗೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದೇನೆ. ಆದರೆ, ಖರ್ಗೆ ಅವರು ಏನೂ ಇಲ್ಲದೆ ಉಡಾನ್ ಉಡಾನ್ ಅಂತ ಪ್ರಚಾರ ಮಾಡುತ್ತಿದ್ದಾರೆ. ಸಂಸದೀಯ ನಾಯಕರಾಗಿ ಖರ್ಗೆ ಜವಾಬ್ದಾರಿಯಿಂದ ಮಾತನಾಡಬೇಕು. ಉಡಾನ್ ಯೋಜನೆಯಡಿ ಸೇರಿಸಬಾರದು ಎಂಬುದು ನಮ್ಮ ಉದ್ದೇಶವಲ್ಲ. ಆದರೆ, ಖರ್ಗೆ ಚುನಾವಣೆ ಸ್ಟಂಟ್ ಮಾಡುವುದನ್ನು ಬಿಡಬೇಕು’ ಎಂದು ಒತ್ತಾಯಿಸಿದರು.