<p><strong>ಕಲಬುರಗಿ: </strong>ನಗರದ ಶಬರಿ ಸಂಕಲ್ಪ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಮಾಲೆ ಧಾರಣೆಯ ಇರುಮುಡಿ ಮಹಾಪೂಜೆ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರನ್ನು ನಾಣ್ಯದಿಂದ ತುಲಾಭಾರ ಮಾಡಲಾಯಿತು.</p>.<p>ಗುರುಸ್ವಾಮಿ ತುಕಾರಾಮ ಚಿತ್ತಾಪುರ ನೇತೃತ್ವದಲ್ಲಿ ಸುಮಾರು 65 ಮಾಲಾಧಾರಿಗಳು ಕಠಿಣ ವೃತ್ತದೊಂದಿಗೆ ಅಯ್ಯಪ್ಪ ಸ್ವಾಮಿಯ ಧ್ಯಾನ ಮಾಡಿ ಶ್ರದ್ಧಾ-ಭಕ್ತಿಯಿಂದ ಪೂಜೆ ನೆರವೇರಿಸಿದರು. ಶರಣಬಸವೇಶ್ವರ ದೇವಸ್ಥಾನದಿಂದ ಸನ್ನಿಧಾನದವರೆಗೆ ಮೆರವಣಿಗೆ ನಡೆಯಿತು.</p>.<p>ಶ್ರೀನಿವಾಸ ಸರಡಗಿಯ ಡಾ. ಅಪ್ಪರಾವ ಮುತ್ಯಾ, ನರನಾಳ ಸೊಂತದ ಶಿವಕುಮಾರ ಶಿವಾಚಾರ್ಯರು, ಮುಲ್ಲಾಮಾರಿ ತೀರದ ಶಂಕರಲಿಂಗ ಮಹಾರಾಜ, ಚವದಾಪೂರ ಮಠದ ಡಾ.ರಾಜಶೇಖರ ಶಿವಾಚಾರ್ಯರು, ಅತನೂರ ಸಂಸ್ಥಾನ ಮಠದ ಅಭಿನವ ಗುರುಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ಡಾ.ದಾಕ್ಷಾಯಣಿ ಎಸ್.ಅಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ದೇಶಮುಖ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಮಾಜಿ ಸಚಿವ ರೇವುನಾಯಕ ಬೇಳಮಗಿ,ಬಸಯ್ಯ ಸಾಲಿಮಠ, ನಾಗರಾಜ ಸಜ್ಜನ, ಚಂದ್ರು ಮಾಲೀಪಾಟೀಲ, ರುದ್ರಶೆಟ್ಟಿ ಕಲ್ಯಾಣಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ನಗರದ ಶಬರಿ ಸಂಕಲ್ಪ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಮಾಲೆ ಧಾರಣೆಯ ಇರುಮುಡಿ ಮಹಾಪೂಜೆ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರನ್ನು ನಾಣ್ಯದಿಂದ ತುಲಾಭಾರ ಮಾಡಲಾಯಿತು.</p>.<p>ಗುರುಸ್ವಾಮಿ ತುಕಾರಾಮ ಚಿತ್ತಾಪುರ ನೇತೃತ್ವದಲ್ಲಿ ಸುಮಾರು 65 ಮಾಲಾಧಾರಿಗಳು ಕಠಿಣ ವೃತ್ತದೊಂದಿಗೆ ಅಯ್ಯಪ್ಪ ಸ್ವಾಮಿಯ ಧ್ಯಾನ ಮಾಡಿ ಶ್ರದ್ಧಾ-ಭಕ್ತಿಯಿಂದ ಪೂಜೆ ನೆರವೇರಿಸಿದರು. ಶರಣಬಸವೇಶ್ವರ ದೇವಸ್ಥಾನದಿಂದ ಸನ್ನಿಧಾನದವರೆಗೆ ಮೆರವಣಿಗೆ ನಡೆಯಿತು.</p>.<p>ಶ್ರೀನಿವಾಸ ಸರಡಗಿಯ ಡಾ. ಅಪ್ಪರಾವ ಮುತ್ಯಾ, ನರನಾಳ ಸೊಂತದ ಶಿವಕುಮಾರ ಶಿವಾಚಾರ್ಯರು, ಮುಲ್ಲಾಮಾರಿ ತೀರದ ಶಂಕರಲಿಂಗ ಮಹಾರಾಜ, ಚವದಾಪೂರ ಮಠದ ಡಾ.ರಾಜಶೇಖರ ಶಿವಾಚಾರ್ಯರು, ಅತನೂರ ಸಂಸ್ಥಾನ ಮಠದ ಅಭಿನವ ಗುರುಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ಡಾ.ದಾಕ್ಷಾಯಣಿ ಎಸ್.ಅಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ದೇಶಮುಖ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಮಾಜಿ ಸಚಿವ ರೇವುನಾಯಕ ಬೇಳಮಗಿ,ಬಸಯ್ಯ ಸಾಲಿಮಠ, ನಾಗರಾಜ ಸಜ್ಜನ, ಚಂದ್ರು ಮಾಲೀಪಾಟೀಲ, ರುದ್ರಶೆಟ್ಟಿ ಕಲ್ಯಾಣಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>