‘ದಾಸಾಯಣ’ ಕೃತಿ ಕುರಿತು ಶೈಲಜಾ ಕೊಪ್ಪರ ಹಾಗೂ ‘ಪುರಂದರ ದಾಸರ ಬಂಡಾಯ ಪ್ರಜ್ಞೆ’ ಕುರಿತು ಅನ್ನಪೂರ್ಣ ಗಂಗಾಣಿ ಪರಿಚಯ ಮಾಡಿದರು. ಹಿರಿಯ ಸಾಹಿತಿ ಸ್ವಾಮಿರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಹಿರಿಯ ಸಾಹಿತಿ ಸುಬ್ರಾವ್ ಕುಲಕರ್ಣಿ, ಬಿ.ಎಚ್.ನಿರಗುಡಿ, ಚಿ.ಸಿ.ನಿಂಗಣ್ಣ, ಕೆಪಿ.ಗಿರಿಧರ, ಮಹಿಪಾಲರೆಡ್ಡಿ ಮುನ್ನೂರ ಇದ್ದರು.