ಶ್ರೀಶೈಲ ಲಕ್ಷ್ಮಣ ಹೀರಾಪುರ (13), ಲಕ್ಷ್ಮಿಕಾಂತ ಗುಂಡಪ್ಪ ಮಡಿವಾಳ (12) ಮೃತಪಟ್ಟ ವಿದ್ಯಾರ್ಥಿಗಳು. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದರು. ಮಳೆ ನೀರಿನಿಂದ ಭರ್ತಿಯಾಗಿದ್ದ ಹೊಂಡದಲ್ಲಿ ಈಜಲು ಇಳಿದಿದ್ದಾರೆ. ಹೊಂಡದಲ್ಲಿ ನೀರು ಹೆಚ್ಚಿದ್ದಿದ್ದರಿಂದ ವಿದ್ಯಾರ್ಥಿಗಳು ಸರಿಯಾಗಿ ಈಜು ಬಾರದೇ ನೀರಿನಲ್ಲಿ ಮುಳಗಿದ್ದಾರೆ. ಬಾಲಕರ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಪಾಲಕರು, ಸುತ್ತಲಿನ ನಿವಾಸಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.