ಕೆರೆ ಭೋಸಗಾ: ತಾಲ್ಲೂಕಿನ ಕೆರೆ ಭೋಸಗಾ ಸಮೀಪ ಶುಕ್ರವಾರ ರಾತ್ರಿ ಲಾರಿ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್ನಲ್ಲಿ ಪ್ರಯಾಣಿಸುತ್ತಿದ್ದ ಮಲ್ಲಿಕಾರ್ಜುನ ಕುಂಬಾರ (30) ಮೃತಪಟ್ಟವರು. ಅವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇನ್ನೊಂದೆಡೆ, ಕಮಲಾಪುರ ತಾಲ್ಲೂಕಿನ ಅವರಾದ–ಬಿ ಗ್ರಾಮದ ಬಳಿ ಶುಕ್ರವಾರ ಸಂಜೆ ಸರ್ಕಾರಿ ಬಸ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ತಂದೆ ಗಾಯಗೊಂಡಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಿಧಾ ನಾಸಿರ್ ಶೇಖ್ (30) ಮೃತಪಟ್ಟವರು. ತಂದೆ ನಾಸಿರ್ ತೀವ್ರ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶಾಂತಿನಾಥ ಕಲಬುರ್ಗಿ ತಿಳಿಸಿದ್ದಾರೆ. ಎರಡೂ ಪ್ರಕರಣಗಳ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.