<p><strong>ಚಿತ್ತಾಪುರ:</strong> ರಾವೂರು ರಸ್ತೆಯಲ್ಲಿ ಗುರುವಾರ ರಾತ್ರಿ ಟಂಟಂ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಅಲ್ಲೂರ್ ಬಿ. ಗ್ರಾಮದ ಮಹಾದೇವ ಅಣಿವೀರಪ್ಪ (45) ಮತ್ತು ಲಕ್ಷ್ಮಿಪುರ ಗ್ರಾಮದ ಮನೋಹರ ಉಮ್ಲಾ ರಾಠೋಡ (35) ಮೃತರು. ಚಿತ್ತಾಪುರದಿಂದ ವಾಡಿ ಮಾರ್ಗವಾಗಿ ಹೋಗುತ್ತಿದ್ದ ಟಂಟಂ ಹಾಗೂ ರಾವೂರ ಮಾರ್ಗದಿಂದ ಎದುರಿಗೆ ಹೊರಟಿದ್ದ ಬೈಕ್ಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. ಪಟ್ಟಣದಿಂದ 2 ಕಿ.ಮೀ. ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಸಹಾಯಕ್ಕೆ ಮುಂದಾದರು. ಆದರೆ, ತೀವ್ರ ರಕ್ತದ ಮಡುವಿನಲ್ಲಿ ಬಿದ್ದ ಬೈಕ್ ಸವಾರರಿಬ್ಬರೂ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ ಮತ್ತು ಪಿಎಸ್ಐ ಶ್ರೀಶೈಲ ಅಂಬಾಟಿ ಸ್ಥಳಕ್ಕೆ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ರಾವೂರು ರಸ್ತೆಯಲ್ಲಿ ಗುರುವಾರ ರಾತ್ರಿ ಟಂಟಂ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಅಲ್ಲೂರ್ ಬಿ. ಗ್ರಾಮದ ಮಹಾದೇವ ಅಣಿವೀರಪ್ಪ (45) ಮತ್ತು ಲಕ್ಷ್ಮಿಪುರ ಗ್ರಾಮದ ಮನೋಹರ ಉಮ್ಲಾ ರಾಠೋಡ (35) ಮೃತರು. ಚಿತ್ತಾಪುರದಿಂದ ವಾಡಿ ಮಾರ್ಗವಾಗಿ ಹೋಗುತ್ತಿದ್ದ ಟಂಟಂ ಹಾಗೂ ರಾವೂರ ಮಾರ್ಗದಿಂದ ಎದುರಿಗೆ ಹೊರಟಿದ್ದ ಬೈಕ್ಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. ಪಟ್ಟಣದಿಂದ 2 ಕಿ.ಮೀ. ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಸಹಾಯಕ್ಕೆ ಮುಂದಾದರು. ಆದರೆ, ತೀವ್ರ ರಕ್ತದ ಮಡುವಿನಲ್ಲಿ ಬಿದ್ದ ಬೈಕ್ ಸವಾರರಿಬ್ಬರೂ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ ಮತ್ತು ಪಿಎಸ್ಐ ಶ್ರೀಶೈಲ ಅಂಬಾಟಿ ಸ್ಥಳಕ್ಕೆ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>