ಅಲ್ಲೂರ್ ಬಿ. ಗ್ರಾಮದ ಮಹಾದೇವ ಅಣಿವೀರಪ್ಪ (45) ಮತ್ತು ಲಕ್ಷ್ಮಿಪುರ ಗ್ರಾಮದ ಮನೋಹರ ಉಮ್ಲಾ ರಾಠೋಡ (35) ಮೃತರು. ಚಿತ್ತಾಪುರದಿಂದ ವಾಡಿ ಮಾರ್ಗವಾಗಿ ಹೋಗುತ್ತಿದ್ದ ಟಂಟಂ ಹಾಗೂ ರಾವೂರ ಮಾರ್ಗದಿಂದ ಎದುರಿಗೆ ಹೊರಟಿದ್ದ ಬೈಕ್ಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. ಪಟ್ಟಣದಿಂದ 2 ಕಿ.ಮೀ. ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಸಹಾಯಕ್ಕೆ ಮುಂದಾದರು. ಆದರೆ, ತೀವ್ರ ರಕ್ತದ ಮಡುವಿನಲ್ಲಿ ಬಿದ್ದ ಬೈಕ್ ಸವಾರರಿಬ್ಬರೂ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.