ಚಿತ್ತಾಪುರ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ದಿಗ್ಗಾಂವ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರು ಮೃತಪಟ್ಟಿದ್ದಾರೆ.
ಬಸವರಾಜ ಶರಣಪ್ಪ ಶಹಾಬಾದಿ (56) ಹಾಗೂ ಅರ್ಜುನ ಸಾಬಣ್ಣ ಕೊಳ್ಳೂರ (52) ಎಂಬುವವರು ಸಿಡಿಲು ಅಪ್ಪಳಿಸಿ ಸಾವನ್ನಪ್ಪಿದ್ದಾರೆ.
ಬಸವರಾಜ ಅವರ ಮೃಹದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಅರ್ಜುನ ಮೃತದೇಹ ಬುಧವಾರ ಪತ್ತೆಯಾಗಿದೆ. ಶವ ಪರೀಕ್ಷೆ ನಡೆಸಿ ಮೃತದೇಹ ಕುಟುಂಬದವರಿಗೆ ನೀಡಲಾಗಿದೆ.
ಕೂಲಿ ಕೆಲಸಕ್ಕೆಂದು ಹೋಗಿದ್ದಾಗ ಅಡವಿಯಲ್ಲಿ ಮಳೆ ಬರುವಾಗ ಈ ಘಟನೆ ಜರುಗಿದೆ. ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.