ಕಳೆದ ನವೆಂಬರ್ ತಿಂಗಳಲ್ಲಿ ಚಿಂಚೋಳಿ ಪೊಲೀಸ್ ಠಾಣೆಯ ಎದುರು ದಲಿತ ಸಂಘಟನೆಗಳ ಮುಖಂಡರು ಧರಣಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ವಿವಿಧ ಸಮಾಜದ ಮುಖಂಡರು, ಬಿಜೆಪಿ ಕಾರ್ಯಕರ್ತರು ಚಿಂಚೋಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ನಿರ್ದಿಷ್ಟ ಸಮುದಾಯದ ಯುವತಿಯರ ಅಪಹರಣ, ಚುಡಾಯಿಸುವಿಕೆ ಮೂಲಕ ಸಮಾಜದ ಸ್ವಾಸ್ಥ್ಯ ಕದಡಲಾಗುತ್ತಿದೆ ಮತ್ತು ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಅಧಿಕಾರಿಗಳ ಪರ ನಿಂತವರೇ ಈಗ ದೂರು ನೀಡಿದ್ದರಿಂದ ಅಧಿಕಾರಿಗಳಿಗೆ ಉರುಳಾಗಿದೆ.