<p><strong>ಸೇಡಂ (ಕಲಬುರ್ಗಿ ಜಿಲ್ಲೆ):</strong> ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಕುರಿಗಾಹಿಗಳಿಬ್ಬರು ಅರೆಬೊಮ್ಮನಳ್ಳಿ ಗ್ರಾಮದ ಕಾಗಿಣಾ ನದಿ ಪಾತ್ರದಲ್ಲಿ ಬುಧವಾರ ಮಧ್ಯಾಹ್ನ ಈಜಾಡುತ್ತಿದ್ದಾಗ ಆಳವಾದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಬೀರನಹಳ್ಳಿ ಗ್ರಾಮದ ಯಲ್ಲಪ್ಪ (26) ಹಾಗೂ ಈತನ ಸಂಬಂಧಿ ನರೇಶ (16) ಮೃತಪಟ್ಟಿದ್ದಾರೆ. ಬೆಳಿಗ್ಗೆ ಕುರಿ ಮೇಯಿಸಲು ಬೊಮ್ಮನಳ್ಳಿಯತ್ತ ತೆರಳಿದ್ದರು. ಮಧ್ಯಾಹ್ನ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದರು. ಇವರು ಕೂಡ ನದಿಯಲ್ಲಿ ಈಜಾಡುತ್ತಿರುವಾಗ ಘಟನೆ ನಡೆದಿದೆ.</p>.<p>ನದಿ ನೀರಲ್ಲಿ ಯಲ್ಲಪ್ಪ ಮುಳುಗುತ್ತಿದ್ದುದನ್ನು ಗಮನಿಸಿ ರಕ್ಷಿಸಲು ಮುಂದಾಗಿದ್ದ ನರೇಶ ಕೂಡ ಮೃತಪಟ್ಟಿದ್ದಾನೆ. ಇಬ್ಬರಿಗೂ ಈಜು ಬರುತ್ತಿತ್ತು ಎನ್ನಲಾಗಿದ್ದು, ನೀರಿನ ಆಳದ ಕುರಿತು ಮಾಹಿತಿ ಇರದೇ ಇರುವುದರಿಂದ ದುರಂತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಮಳಖೇಡ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.</p>.<p>ಕೆಲದಿನಗಳ ಹಿಂದೆ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ನವೆಂಬರ್ 1ರಂದು ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಮಲ್ಲಿಕಾರ್ಜುನ ಸ್ವಾಮಿ ಮೃತಪಟ್ಟಿದ್ದರು. ಘಟನೆ ಮಾಸುವ ಮುನ್ನವೇ ಮತ್ತಿಬ್ಬರು ನದಿ ಪಾಲಾಗಿದ್ದಾರೆ. ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ (ಕಲಬುರ್ಗಿ ಜಿಲ್ಲೆ):</strong> ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಕುರಿಗಾಹಿಗಳಿಬ್ಬರು ಅರೆಬೊಮ್ಮನಳ್ಳಿ ಗ್ರಾಮದ ಕಾಗಿಣಾ ನದಿ ಪಾತ್ರದಲ್ಲಿ ಬುಧವಾರ ಮಧ್ಯಾಹ್ನ ಈಜಾಡುತ್ತಿದ್ದಾಗ ಆಳವಾದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಬೀರನಹಳ್ಳಿ ಗ್ರಾಮದ ಯಲ್ಲಪ್ಪ (26) ಹಾಗೂ ಈತನ ಸಂಬಂಧಿ ನರೇಶ (16) ಮೃತಪಟ್ಟಿದ್ದಾರೆ. ಬೆಳಿಗ್ಗೆ ಕುರಿ ಮೇಯಿಸಲು ಬೊಮ್ಮನಳ್ಳಿಯತ್ತ ತೆರಳಿದ್ದರು. ಮಧ್ಯಾಹ್ನ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದರು. ಇವರು ಕೂಡ ನದಿಯಲ್ಲಿ ಈಜಾಡುತ್ತಿರುವಾಗ ಘಟನೆ ನಡೆದಿದೆ.</p>.<p>ನದಿ ನೀರಲ್ಲಿ ಯಲ್ಲಪ್ಪ ಮುಳುಗುತ್ತಿದ್ದುದನ್ನು ಗಮನಿಸಿ ರಕ್ಷಿಸಲು ಮುಂದಾಗಿದ್ದ ನರೇಶ ಕೂಡ ಮೃತಪಟ್ಟಿದ್ದಾನೆ. ಇಬ್ಬರಿಗೂ ಈಜು ಬರುತ್ತಿತ್ತು ಎನ್ನಲಾಗಿದ್ದು, ನೀರಿನ ಆಳದ ಕುರಿತು ಮಾಹಿತಿ ಇರದೇ ಇರುವುದರಿಂದ ದುರಂತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಮಳಖೇಡ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.</p>.<p>ಕೆಲದಿನಗಳ ಹಿಂದೆ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ನವೆಂಬರ್ 1ರಂದು ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಮಲ್ಲಿಕಾರ್ಜುನ ಸ್ವಾಮಿ ಮೃತಪಟ್ಟಿದ್ದರು. ಘಟನೆ ಮಾಸುವ ಮುನ್ನವೇ ಮತ್ತಿಬ್ಬರು ನದಿ ಪಾಲಾಗಿದ್ದಾರೆ. ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>