ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಳ್ಳಿ ತಾಂಡಾ ನಿವಾಸಿ ರವಿ ಜಯಸಿಂಗ್ ಜಾಧವ ಹಾಗೂ ಶಿವಾಜಿ ವಿಠಲ ಜಾಧವ ಬಂಧಿತ ಆರೋಪಿಗಳು. ಇವರು ಕಲಬುರ್ಗಿ ತಾಲ್ಲೂಕಿನ ಮಾಲಗತ್ತಿ ಗ್ರಾಮದ ಹೊರವಲಯದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕತ್ತರಿಸಿ, ತುಂಡು ಮಾಡಿ ವಾಹನದಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದಿದ್ದರಿಂದ ಅರಣ್ಯಾಧಿಕಾರಿಗಳು ವಾಹನ ತಡೆದು ತಪಾಸಣೆ ನಡೆಸಿದರು. ಪ್ರಾದೇಶಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಸುಶೀಲಕುಮಾರ ಚವ್ಹಾಣ, ಉಪವಲಯ ಅರಣ್ಯಾಧಿಕಾರಿ ಕಾಶಿನಾಥ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾದರು.