<p><strong>ಕಲಬುರ್ಗಿ:</strong> ಇಲ್ಲಿನ ರಿಂಗ್ ರಸ್ತೆಯ ನಾಗನಹಳ್ಳಿ ಕ್ರಾಸ್ ಬಳಿ ಶನಿವಾರ ಬೈಕ್ ಜಾರಿಬಿದ್ದು ಯುವಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>‘ಅಭಿಷೇಕ ವಿಜಯಕುಮಾರ ಮಾಲಿಪಾಟೀಲ (25) ಮತ್ತು ಈತನ ಸ್ನೇಹಿತ ಅಭಿಷೇಕ ಬಸವರಾಜ ಪಟ್ಟಣಶೆಟ್ಟಿ (25) ಗಾಯಗೊಂಡವರು. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಿಂಗ್ ರಸ್ತೆಯಲ್ಲಿ ರಸ್ತೆ ಮಧ್ಯದ ವಿಭಜಕಕ್ಕೆ ಬೈಕ್ ಗುದ್ದಿದೆ. ಬೈಕ್ ಬಿದ್ದ ಮೇಲೆ ಇಬ್ಬರನ್ನೂ ರಸ್ತೆ ಮೇಲೆ ಎಳೆದುಕೊಂಡು ಹೋಗಿದೆ. ಇದರಿಂದ ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಅಮರೇಶ ಸ್ಥಳಕ್ಕೆ ಭೇಟಿ ನೀಡಿದರು. ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ದರೋಡೆಗೆ ಸಂಚು: ಬಂಧನ</strong></p>.<p>ನಗರದ ದುಬೈ ಕಾಲೊನಿಯಲ್ಲಿರುವ ಸರ್ಕಾರಿ ಆಸ್ಪತ್ರೆಯ ಬಳಿಯ ಸಾರ್ವಜನಿಕ ಸ್ಥಳದಲ್ಲಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಏಳು ಆರೋಪಿಗಳನ್ನು ಕಮಿಷನ್ರೇಟ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಶೇಖಜಿಲಾನಿ, ತಯ್ಯಬಅಲಿ, ಸೈಯದ್ ಜುಬೇರ್, ಖಾಜಾಪಾಷಾ ಅಲಿಯಾಸ್ ಸೋಹೆಲ್, ಮಹ್ಮದ್ ನದೀಮ್ ಮತ್ತು ಇಮ್ರಾನ್ ಶೇಖ್ ಬಂಧಿತರು.</p>.<p>ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ, ಡಿಸಿಪಿಗಳಾದ ಎ.ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಎಸಿಪಿ ಗಿರೀಶ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ ಮತ್ತು ಸಿಬ್ಬಿಂದ ದಾಳಿ ನಡೆಸಿದ್ದಾರೆ.</p>.<p>ಆರೋಪಿಗಳು 15 ದಿನಗಳಹಿಂದೆ ಚೌಕ್ ಠಾಣೆಯ ವ್ಯಾಪ್ತಿಯಲ್ಲಿರುವ ಲಾರಿ ತಂಗುದಾಣ ಮತ್ತು ಆಟೊ ನಗರದಲ್ಲಿ ಚಾಲಕನಿಗೆ ಚಾಕು ಇರಿದು ಹಣ ಮತ್ತು ಮೊಬೈಲ್ ದರೋಡೆ ಮಾಡಿದ್ದರು. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ವಿದ್ಯುತ್ ತಂತಿ ತಗಲಿ ಮಹಿಳೆ ಸಾವು</strong></p>.<p><strong>ಚಿಂಚೋಳಿ:</strong> ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀನಗರ ಪೆದ್ದಾ ತಾಂಡಾದ ಹಿಂದುಗಡೆ ಕಾಡಿನಲ್ಲಿ ಶನಿವಾರ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಮೃತರನ್ನು ಶ್ರೀನಗರ ಪೆದ್ದಾ ತಾಂಡಾದ ನಿವಾಸಿ ಸೀತಾ ಬಾಯಿ ಲಷ್ಕರ್ ಚವ್ಹಾಣ (48) ಎಂದು ಗುರುತಿಸಲಾಗಿದೆ.</p>.<p>ಎಂದಿನಂತೆ ತಮ್ಮ ಮೇಕೆಗಳನ್ನು ಮೇಯಿಸಲು ಮನೆಯಿಂದ ಬೆಳಿಗ್ಗೆ 11.30ಕ್ಕೆ ಕಾಡಿಗೆ ತೆರಳಿದ್ದಾರೆ. ಕಾಡಿನಲ್ಲಿ ಮಾರ್ಗಮಧ್ಯದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ನೆಲದಿಂದ ಕೇವಲ 4 ಅಡಿ ಎತ್ತರದಲ್ಲಿ ನೇತಾಡುತ್ತಿತ್ತು. ಗಿಡಗಳ ಮಧ್ಯೆ ಸಾಗುತ್ತಿದ್ದ ಸೀತಾಬಾಯಿ ಅವರು ತಂತಿಯನ್ನು ಗಮನಿಸದೇ ಅದರ ಮಾರ್ಗದಲ್ಲೇ ದಾಟಿದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವೇಳೆ ಅವರ ಕುತ್ತಿಗೆ ಭಾಗಕ್ಕೆ ತಂತಿ ತಗುಲಿ ಸ್ಥಳದಲ್ಲೇ ಅವರು ಅಸುನೀಗಿದ್ದಾರೆ. ತಂತಿಯಿಂದ ಹೊತ್ತಿಕೊಂಡ ಬೆಂಕಿಯಿಂದ ಅವರ ಕುತ್ತಿಗೆ ಹಾಗೂ ಬೆನ್ನಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.</p>.<p>ಮೃತರಿಗೆ ಪತಿ ಲಷ್ಕರ್ ಚವ್ಹಾಣ ಹಾಗೂ ಇಬ್ಬರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ. ಲಷ್ಕರ್ ಚವ್ಹಾಣ ನೀಡಿದ ದೂರಿನ ಮೇರೆಗೆ ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಉಪೇಂದ್ರಕುಮಾರ, ಎಂಜಿನಿಯರ್ ಉಮೇಶ ಗೋಳಾ, ಶಾಖಾಧಿಕಾರಿ ಮೋಹನ ರಾಠೋಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ರಾಜು ರಾಠೋಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p><strong>ಮೂರನೇ ಸಾವು: </strong>ಯಡ್ರಾಮಿ ತಾಲ್ಲೂಕಿನ ಕಣಮೇಶ್ವರ ಗ್ರಾಮದಲ್ಲಿ ಕೂಡ ಶುಕ್ರವಾರ ಕೆಲಸ ಮಾಡಲು ಹೋಗಿದ್ದ ಇಬ್ಬರು ಯುವಕರು ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ರೀತಿ ತಂತಿ ಹರಿದು ಕಾರಣ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಇಲ್ಲಿನ ರಿಂಗ್ ರಸ್ತೆಯ ನಾಗನಹಳ್ಳಿ ಕ್ರಾಸ್ ಬಳಿ ಶನಿವಾರ ಬೈಕ್ ಜಾರಿಬಿದ್ದು ಯುವಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>‘ಅಭಿಷೇಕ ವಿಜಯಕುಮಾರ ಮಾಲಿಪಾಟೀಲ (25) ಮತ್ತು ಈತನ ಸ್ನೇಹಿತ ಅಭಿಷೇಕ ಬಸವರಾಜ ಪಟ್ಟಣಶೆಟ್ಟಿ (25) ಗಾಯಗೊಂಡವರು. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಿಂಗ್ ರಸ್ತೆಯಲ್ಲಿ ರಸ್ತೆ ಮಧ್ಯದ ವಿಭಜಕಕ್ಕೆ ಬೈಕ್ ಗುದ್ದಿದೆ. ಬೈಕ್ ಬಿದ್ದ ಮೇಲೆ ಇಬ್ಬರನ್ನೂ ರಸ್ತೆ ಮೇಲೆ ಎಳೆದುಕೊಂಡು ಹೋಗಿದೆ. ಇದರಿಂದ ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಅಮರೇಶ ಸ್ಥಳಕ್ಕೆ ಭೇಟಿ ನೀಡಿದರು. ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ದರೋಡೆಗೆ ಸಂಚು: ಬಂಧನ</strong></p>.<p>ನಗರದ ದುಬೈ ಕಾಲೊನಿಯಲ್ಲಿರುವ ಸರ್ಕಾರಿ ಆಸ್ಪತ್ರೆಯ ಬಳಿಯ ಸಾರ್ವಜನಿಕ ಸ್ಥಳದಲ್ಲಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಏಳು ಆರೋಪಿಗಳನ್ನು ಕಮಿಷನ್ರೇಟ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಶೇಖಜಿಲಾನಿ, ತಯ್ಯಬಅಲಿ, ಸೈಯದ್ ಜುಬೇರ್, ಖಾಜಾಪಾಷಾ ಅಲಿಯಾಸ್ ಸೋಹೆಲ್, ಮಹ್ಮದ್ ನದೀಮ್ ಮತ್ತು ಇಮ್ರಾನ್ ಶೇಖ್ ಬಂಧಿತರು.</p>.<p>ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ, ಡಿಸಿಪಿಗಳಾದ ಎ.ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಎಸಿಪಿ ಗಿರೀಶ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ ಮತ್ತು ಸಿಬ್ಬಿಂದ ದಾಳಿ ನಡೆಸಿದ್ದಾರೆ.</p>.<p>ಆರೋಪಿಗಳು 15 ದಿನಗಳಹಿಂದೆ ಚೌಕ್ ಠಾಣೆಯ ವ್ಯಾಪ್ತಿಯಲ್ಲಿರುವ ಲಾರಿ ತಂಗುದಾಣ ಮತ್ತು ಆಟೊ ನಗರದಲ್ಲಿ ಚಾಲಕನಿಗೆ ಚಾಕು ಇರಿದು ಹಣ ಮತ್ತು ಮೊಬೈಲ್ ದರೋಡೆ ಮಾಡಿದ್ದರು. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ವಿದ್ಯುತ್ ತಂತಿ ತಗಲಿ ಮಹಿಳೆ ಸಾವು</strong></p>.<p><strong>ಚಿಂಚೋಳಿ:</strong> ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀನಗರ ಪೆದ್ದಾ ತಾಂಡಾದ ಹಿಂದುಗಡೆ ಕಾಡಿನಲ್ಲಿ ಶನಿವಾರ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಮೃತರನ್ನು ಶ್ರೀನಗರ ಪೆದ್ದಾ ತಾಂಡಾದ ನಿವಾಸಿ ಸೀತಾ ಬಾಯಿ ಲಷ್ಕರ್ ಚವ್ಹಾಣ (48) ಎಂದು ಗುರುತಿಸಲಾಗಿದೆ.</p>.<p>ಎಂದಿನಂತೆ ತಮ್ಮ ಮೇಕೆಗಳನ್ನು ಮೇಯಿಸಲು ಮನೆಯಿಂದ ಬೆಳಿಗ್ಗೆ 11.30ಕ್ಕೆ ಕಾಡಿಗೆ ತೆರಳಿದ್ದಾರೆ. ಕಾಡಿನಲ್ಲಿ ಮಾರ್ಗಮಧ್ಯದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ನೆಲದಿಂದ ಕೇವಲ 4 ಅಡಿ ಎತ್ತರದಲ್ಲಿ ನೇತಾಡುತ್ತಿತ್ತು. ಗಿಡಗಳ ಮಧ್ಯೆ ಸಾಗುತ್ತಿದ್ದ ಸೀತಾಬಾಯಿ ಅವರು ತಂತಿಯನ್ನು ಗಮನಿಸದೇ ಅದರ ಮಾರ್ಗದಲ್ಲೇ ದಾಟಿದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವೇಳೆ ಅವರ ಕುತ್ತಿಗೆ ಭಾಗಕ್ಕೆ ತಂತಿ ತಗುಲಿ ಸ್ಥಳದಲ್ಲೇ ಅವರು ಅಸುನೀಗಿದ್ದಾರೆ. ತಂತಿಯಿಂದ ಹೊತ್ತಿಕೊಂಡ ಬೆಂಕಿಯಿಂದ ಅವರ ಕುತ್ತಿಗೆ ಹಾಗೂ ಬೆನ್ನಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.</p>.<p>ಮೃತರಿಗೆ ಪತಿ ಲಷ್ಕರ್ ಚವ್ಹಾಣ ಹಾಗೂ ಇಬ್ಬರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ. ಲಷ್ಕರ್ ಚವ್ಹಾಣ ನೀಡಿದ ದೂರಿನ ಮೇರೆಗೆ ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಉಪೇಂದ್ರಕುಮಾರ, ಎಂಜಿನಿಯರ್ ಉಮೇಶ ಗೋಳಾ, ಶಾಖಾಧಿಕಾರಿ ಮೋಹನ ರಾಠೋಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ರಾಜು ರಾಠೋಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p><strong>ಮೂರನೇ ಸಾವು: </strong>ಯಡ್ರಾಮಿ ತಾಲ್ಲೂಕಿನ ಕಣಮೇಶ್ವರ ಗ್ರಾಮದಲ್ಲಿ ಕೂಡ ಶುಕ್ರವಾರ ಕೆಲಸ ಮಾಡಲು ಹೋಗಿದ್ದ ಇಬ್ಬರು ಯುವಕರು ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ರೀತಿ ತಂತಿ ಹರಿದು ಕಾರಣ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>