ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ: ವೇತನಾನುದಾನಕ್ಕೆ ಆಗ್ರಹಿಸಿ ಶಾಲೆಗಳ ಬಂದ್ ಯಶಸ್ವಿ

Last Updated 15 ಫೆಬ್ರುವರಿ 2021, 7:32 IST
ಅಕ್ಷರ ಗಾತ್ರ

ಕಲಬುರ್ಗಿ: ವೇತನಾನುದಾನ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಹಾಗೂ ಜಿಲ್ಲೆಯಲ್ಲಿನ ಅನುದಾನ ರಹಿತ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಬಂದ್ ಮಾಡಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ ಕರೆ ನೀಡಿದ್ದ ಒಂದು ದಿನದ ಬಂದ್‌ಗೆ ನಗರ ಹಾಗೂ ಜಿಲ್ಲೆಯ ಬಹುಪಾಲು ಖಾಸಗಿ ಅನುದಾನ ರಹಿತ ಶಾಲೆಗಳು ಸ್ಪಂದಿಸಿ, ಆಟ-ಪಾಠಗಳನ್ನು ನಿಲ್ಲಿಸಿದವು.

ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಸ್ವತಃ ತಾವೇ ತಮ್ಮ ಶಾಲೆಗಳಿಗೆ ಬೀಗ ಹಾಕಿ ಆವರಣದ ಮುಂದೆ ಧರಣಿ ನಡೆಸಿದರು.

ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ನೂರಂದೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಸೋಮವಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು

ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ನೂರಂದೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಸೋಮವಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು

ಶಾಲೆ ಬಂದ್ ಮಾಡುವುದಾಗಿ ಹೋರಾಟಗಾರರು ಮುಂಚೆಯೇ ತಿಳಿಸಿದ್ದರು. ಅಲ್ಲದೇ, ಆಯಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮೊಬೈಲ್ ಮೂಲಕ ಪಾಲಕರಿಗೆ ಸಂದೇಶ ಕಳುಹಿಸಿದ್ದರು. ಹೀಗಾಗಿ, ಸೋಮವಾರ ಮಕ್ಕಳು ಕೂಡ ಶಾಲೆಗಳಿಗೆ ಬರಲಿಲ್ಲ.

ಕಲ್ಯಾಣ ಕರ್ನಾಟಕ ಭಾಗದ ಎಲ್ಲ 1500 ಕನ್ನಡ ಶಾಲೆಗಳು ಹಾಗೂ 2000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನೂ ಬಂದ್ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT