ಅಭಿವೃದ್ದಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಮೈಕ್ರೊ ಕ್ರೆಡಿಟ್ ಯೋಜನೆಗಳ ಮೂಲಕ ನಿರುದ್ಯೋಗಿಗಳಿಗೆ ಅನುಕೂಲವಾಗಿ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೀಡಲಾಗುತ್ತಿರುವ ₹ 5 ಲಕ್ಷ ಹಾಗೂ ₹ 3.5 ಲಕ್ಷ ಮೊತ್ತದ ಸಹಾಯಧನವನ್ನು ₹ 1 ಲಕ್ಷಕ್ಕೆ ಇಳಿಸಿರುವ ರಾಜ್ಯ ಸರ್ಕಾರದ ನಿರ್ಧಾರ ದಲಿತರ ಅಭಿವೃದ್ಧಿಗೆ ಕಂಟಕವಾಗಿದೆ ಎಂದು ಸಮಿತಿ ಸಂಚಾಲಕ ಅರ್ಜುನ ಭದ್ರೆ ಅಸಮಾಧಾನ ವ್ಯಕ್ತಪಡಿಸಿದರು.