ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿ,‘ಜಿಲ್ಲಾ ಉಸ್ತುವಾರಿ ಸಚಿವರು ವಿಜನ್–2050 ಡಾಕ್ಯುಮೆಂಟ್ ತಯಾರಿಸಲು ಸೂಚಿಸಿದ್ದಾರೆ. ಕೃಷಿ ಹಾಗೂ ತೋಟಗಾರಿಕೆಗೆ ಒತ್ತು ನೀಡಬೇಕಾಗಿದೆ. ಆದ್ದರಿಂದ ಜಿಲ್ಲೆಯಲ್ಲಿರುವ ತೋಟಗಾರಿಕೆ ಪ್ರದೇಶದ ವಿಸ್ತೀರ್ಣ, ಬೆಳೆಗಳು, ಬೆಳೆ ಬೆಳೆಯಲು ಇರುವ ಅವಕಾಶಗಳು ಹಾಗೂ ನೀರಾವರಿ ಸೌಲಭ್ಯದ ಕುರಿತು ಮಾಹಿತಿ ನೀಡಬೇಕು’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗೆ ಸೂಚಿಸಿದರು.