<p><strong>ಕಲಬುರ್ಗಿ</strong>: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದ ಕಲಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಕ್ಷಣ ಪರಿಹಾರವಾಗಿ ₹ 50 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಪ್ರವಾಹದಿಂದಾಗಿ ಭಾರಿ ಪ್ರಮಾಣದ ಹಾನಿಯಾಗಿದ್ದರೂ ಸರ್ಕಾರ ಕೈಕೊಟ್ಟು ಕುಳಿತಿದ್ದು, ಪರಿಹಾರ ನೀಡುವ ಮಾತನ್ನು ಆಡುತ್ತಿಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಬಗ್ಗೆ ಈ ನಿರ್ಲಕ್ಷ್ಯ ಸಲ್ಲದು. ತೀವ್ರ ಸ್ವರೂಪದ ನಷ್ಟವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ. ಕೂಡಲೇ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಬರಬೇಕು. ಕೇಂದ್ರದಿಂದ ಹೆಚ್ಚಿನ ಪ್ರಮಾಣದ ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಕನ್ನಡಪರ ಸಂಘಟನೆಗಳ ಮುಖಂಡರಾದ ಮಂಜುನಾಥ ನಾಲವಾರಕರ, ಸಚಿನ್ ಫರಹತಾಬಾದ್, ರವಿ ದೇಗಾಂವ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದ ಕಲಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಕ್ಷಣ ಪರಿಹಾರವಾಗಿ ₹ 50 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಪ್ರವಾಹದಿಂದಾಗಿ ಭಾರಿ ಪ್ರಮಾಣದ ಹಾನಿಯಾಗಿದ್ದರೂ ಸರ್ಕಾರ ಕೈಕೊಟ್ಟು ಕುಳಿತಿದ್ದು, ಪರಿಹಾರ ನೀಡುವ ಮಾತನ್ನು ಆಡುತ್ತಿಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಬಗ್ಗೆ ಈ ನಿರ್ಲಕ್ಷ್ಯ ಸಲ್ಲದು. ತೀವ್ರ ಸ್ವರೂಪದ ನಷ್ಟವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ. ಕೂಡಲೇ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಬರಬೇಕು. ಕೇಂದ್ರದಿಂದ ಹೆಚ್ಚಿನ ಪ್ರಮಾಣದ ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಕನ್ನಡಪರ ಸಂಘಟನೆಗಳ ಮುಖಂಡರಾದ ಮಂಜುನಾಥ ನಾಲವಾರಕರ, ಸಚಿನ್ ಫರಹತಾಬಾದ್, ರವಿ ದೇಗಾಂವ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>