ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ: ಡಾ. ಶರಣಬಸವಪ್ಪ ಅಪ್ಪ ಬೆಂಬಲ ಕೇಳಿದ ವೀರಭದ್ರ ಸಿಂಪಿ

Last Updated 27 ಅಕ್ಟೋಬರ್ 2021, 14:15 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸ್ಥಾನಕ್ಕೆ ಮರು ಆಯ್ಕೆ ಬಯಸಿ ಸ್ಪರ್ಧಿಸಿರುವ ವೀರಭದ್ರ ಸಿಂಪಿ ಅವರು ಶರಣಬಸವೇಶ್ವರ ದಾಸೋಹ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವೇಶ್ವರ ವಿ.ವಿ. ಕುಲಾಧಿಪತಿಡಾ. ಶರಣಬಸವಪ್ಪ ಅಪ್ಪ ಅವರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಪ್ಪ, ’ಎಂಥದ್ದೇ ಪರಿಸ್ಥಿತಿ ಬಂದರೂ ಆದರ್ಶಗಳನ್ನು ನಂಬಿ ಬದುಕುವುದರಿಂದ ನಮ್ಮ ಉನ್ನತಿ ಇತರರಿಗೆ ಮಾದರಿ ಎನಿಸುತ್ತದೆ. ಆದರ್ಶದ ಬೆಳೆಯನ್ನು ಬಿತ್ತಿದಾಗ ಮಾತ್ರ ಆದರ್ಶ ಇಳುವರಿಯಾಗಿ ಬರುತ್ತದೆ. ಈ ನಿಟ್ಟಿನಲ್ಲಿ ಜಾಗ್ರತೆ ವಹಿಸಬೇಕಾದ ಅಗತ್ಯವಿದೆ‘ ಎಂದರು.

1928 ಮತ್ತು 1948ರಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ದೊಡ್ಡಪ್ಪ ಅಪ್ಪ ಅವರ ನೇತೃತ್ವದಲ್ಲಿ ನಡೆಸಿ ನಾಡು ನುಡಿಗಾಗಿ ಸಂಸ್ಥಾನವು ಶ್ರಮಿಸುತ್ತಾ ಬಂದಿದೆ. ಜೊತೆಗೆ, ಕರ್ನಾಟಕ ಏಕೀಕರಣದ ಹೋರಾಟಕ್ಕೂ ಶರಣ ಸಂಸ್ಥಾನ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನಾಡು, ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗಾಗಿ ವೀರಭದ್ರ ಸಿಂಪಿ ಮುಂಚೂಣಿಯಲ್ಲಿ ನಿಂತು ನಡೆಸುತ್ತಾ ಬಂದಿರುವ ಹೋರಾಟಗಳನ್ನು ತಾವು ಗಮನಿಸಿರುವುದಾಗಿ ಹೇಳಿದರು.

ಡಾ.ದಾಕ್ಷಾಯಣಿ ಅಪ್ಪ ಮಾತನಾಡಿ, ಶರಣ ಸಂಸ್ಕೃತಿಯ ಹಾದಿಯಲ್ಲಿ ನಡೆಯುವವರಿಗೆ ನಿಶ್ಚಿತವಾಗಿಯೂ ಫಲವಿದೆ ಎಂದರು.

ಡಾ.ಶಿವರಾಜ ಶಾಸ್ತ್ರಿ, ಪ್ರೊ.ನಂದಕುಮಾರ, ದೌಲತರಾಯ ಮಾಲಿಪಾಟೀಲ, ವಿನೋದ ಜನೆವರಿ, ಮಲ್ಲಿಕಾರ್ಜುನ ಮೇತ್ರಿ, ಹಣಮಂತರಾಯ ಐನೂಲಿ, ಮಹಾಂತೇಶ ಹೂಗಾರ, ವೀರಸಂಗಪ್ಪ ಸುಲೇಗಾಂವ, ವಿಜಯಕುಮಾರ ದೇಶಮುಖ, ಶ್ರೀಕಾಂತ ಫುಲಾರಿ, ಸಾಗರ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT