<p><strong>ವಾಡಿ:</strong> ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯ ಐತಿಹಾಸಿಕ ವೀರಭದ್ರೇಶ್ವರ ದೇವಸ್ಥಾನ ಜಾತ್ರೆಯ ರಥೋತ್ಸವ ಇಂದು ಸಾವಿರಾರು ಜನರ ಸಮ್ಮುಖದಲ್ಲಿ ನಡೆಯಲಿದೆ.</p>.<p>ಭಾನುವಾರದ (ನ.9) ರಾತ್ರಿ ಪ್ರಮುಖ ಧಾರ್ಮಿಕ ಆಚರಣೆಯಾದ ಭಕ್ತರ ಅಗ್ಗಿ ತುಳಿಯುವ ಕಾರ್ಯದಲ್ಲಿ ಸಾವಿರಾರು ಜನರು ಭಾಗಿಯಾಗಿ ಭಕ್ತಿ ಸಮರ್ಪಿಸಿದರು. ನ.10ರ ಸೋಮವಾರ ಸಂಜೆ 6 ಗಂಟೆಗೆ ಭವ್ಯ ರಥೋತ್ಸವ ನಡೆಯಲಿದ್ದು, ರಾಜ್ಯ ಮತ್ತು ಹೊರರಾಜ್ಯಗಳಿಂದ ಸಹಿತ ಸಹಸ್ರಾರು ಭಕ್ತರು ಜಾತ್ರೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.</p>.<p>ನ.5ರಿಂದ ಗ್ರಾಮದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಗ್ರಾಮದಲ್ಲಿ ಸಂಭ್ರಮ ಕಳೆಗಟ್ಟಿದೆ. ಭಕ್ತರ ಅಗ್ಗಿ ಪ್ರವೇಶದಲ್ಲಿ ಮೊದಲು ಪೂಜಾರಿಗಳು, ಪುರವಂತರು ಆನಂತರ ಭಕ್ತರು ಅಗ್ಗಿ ಕುಂಡದಲ್ಲಿ ಹಾಯ್ದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ದೇವರಲ್ಲಿ ಪ್ರಾರ್ಥಿಸುವುದು ವಾಡಿಕೆಯಾಗಿದೆ.</p>.<p>ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ್ದ ವೀರಭದ್ರೇಶ್ವರನ ಭಕ್ತರು ಶೃದ್ಧಾ - ಭಕ್ತಿಯಿಂದ ಅಗ್ನಿ ತುಳಿದು ಭಕ್ತಿ ಮೆರೆದರು. ದೂರದೂರುಗಳಿಂದ ಭಕ್ತರು, ನೆಂಟರಿಷ್ಟರು ಈಗಾಗಲೇ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ.</p>.<p>ದೇವಸ್ಥಾನ ವಿದ್ಯುತ್ ಅಲಂಕಾರದಿಂದ ಝಗಮಗಿಸುತ್ತಿದೆ. ನಾಡಿನ ಭಕ್ತರ ಆರಾಧ್ಯ ದೈವವೇ ಆಗಿರುವ ವೀರಭದ್ರನ ಪೂಜೆ, ಅಭಿಷೇಕ, ಹೀಗೆ ನಾನಾ ಧಾರ್ಮಿಕ ಕಾರ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ.</p>.<p>ರಥೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪಿಎಸ್ಐ ತಿರುಮಲೇಶ .ಕೆ ನೇತೃತ್ವದಲ್ಲಿ ಈಚೆಗೆ ಶಾಂತಿಸಭೆ ನಡೆಸಿದ್ದು, ಪೊಲೀಸ್ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ವಾಹನಗಳ ನಿಲುಗಡೆಗೆ ಹಾಗೂ ಸುಗಮ ವ್ಯಾಪಾರ ವಹಿವಾಟಿಗೆ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯ ಐತಿಹಾಸಿಕ ವೀರಭದ್ರೇಶ್ವರ ದೇವಸ್ಥಾನ ಜಾತ್ರೆಯ ರಥೋತ್ಸವ ಇಂದು ಸಾವಿರಾರು ಜನರ ಸಮ್ಮುಖದಲ್ಲಿ ನಡೆಯಲಿದೆ.</p>.<p>ಭಾನುವಾರದ (ನ.9) ರಾತ್ರಿ ಪ್ರಮುಖ ಧಾರ್ಮಿಕ ಆಚರಣೆಯಾದ ಭಕ್ತರ ಅಗ್ಗಿ ತುಳಿಯುವ ಕಾರ್ಯದಲ್ಲಿ ಸಾವಿರಾರು ಜನರು ಭಾಗಿಯಾಗಿ ಭಕ್ತಿ ಸಮರ್ಪಿಸಿದರು. ನ.10ರ ಸೋಮವಾರ ಸಂಜೆ 6 ಗಂಟೆಗೆ ಭವ್ಯ ರಥೋತ್ಸವ ನಡೆಯಲಿದ್ದು, ರಾಜ್ಯ ಮತ್ತು ಹೊರರಾಜ್ಯಗಳಿಂದ ಸಹಿತ ಸಹಸ್ರಾರು ಭಕ್ತರು ಜಾತ್ರೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.</p>.<p>ನ.5ರಿಂದ ಗ್ರಾಮದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಗ್ರಾಮದಲ್ಲಿ ಸಂಭ್ರಮ ಕಳೆಗಟ್ಟಿದೆ. ಭಕ್ತರ ಅಗ್ಗಿ ಪ್ರವೇಶದಲ್ಲಿ ಮೊದಲು ಪೂಜಾರಿಗಳು, ಪುರವಂತರು ಆನಂತರ ಭಕ್ತರು ಅಗ್ಗಿ ಕುಂಡದಲ್ಲಿ ಹಾಯ್ದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ದೇವರಲ್ಲಿ ಪ್ರಾರ್ಥಿಸುವುದು ವಾಡಿಕೆಯಾಗಿದೆ.</p>.<p>ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ್ದ ವೀರಭದ್ರೇಶ್ವರನ ಭಕ್ತರು ಶೃದ್ಧಾ - ಭಕ್ತಿಯಿಂದ ಅಗ್ನಿ ತುಳಿದು ಭಕ್ತಿ ಮೆರೆದರು. ದೂರದೂರುಗಳಿಂದ ಭಕ್ತರು, ನೆಂಟರಿಷ್ಟರು ಈಗಾಗಲೇ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ.</p>.<p>ದೇವಸ್ಥಾನ ವಿದ್ಯುತ್ ಅಲಂಕಾರದಿಂದ ಝಗಮಗಿಸುತ್ತಿದೆ. ನಾಡಿನ ಭಕ್ತರ ಆರಾಧ್ಯ ದೈವವೇ ಆಗಿರುವ ವೀರಭದ್ರನ ಪೂಜೆ, ಅಭಿಷೇಕ, ಹೀಗೆ ನಾನಾ ಧಾರ್ಮಿಕ ಕಾರ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ.</p>.<p>ರಥೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪಿಎಸ್ಐ ತಿರುಮಲೇಶ .ಕೆ ನೇತೃತ್ವದಲ್ಲಿ ಈಚೆಗೆ ಶಾಂತಿಸಭೆ ನಡೆಸಿದ್ದು, ಪೊಲೀಸ್ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ವಾಹನಗಳ ನಿಲುಗಡೆಗೆ ಹಾಗೂ ಸುಗಮ ವ್ಯಾಪಾರ ವಹಿವಾಟಿಗೆ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>