<p><strong>ಯಡ್ರಾಮಿ:</strong> ‘ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಸುಖ ಮತ್ತು ಶಾಂತಿಗೆ ಧರ್ಮ ಪರಿಪಾಲನೆ ಬಹಳ ಮುಖ್ಯ. ವೀರಶೈವ ಧರ್ಮದಲ್ಲಿ ಸಂಸ್ಕಾರಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಈ ನಾಡಿನ ಮಠಗಳು ಭಕ್ತರಿಗೆ ಸಂಸ್ಕಾರ ಕೊಡುವ ಜ್ಞಾನ ಕೇಂದ್ರಗಳಾಗಿವೆ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಹೇಳಿದರು.</p>.<p>ತಾಲ್ಲೂಕಿನ ಮಾಗಣಗೆರೆಯಲ್ಲಿ ಭಾನುವಾರ ರುದ್ರಮುನೀಶ್ವರ ಹಿರೇಮಠದ ಶ್ರೀಗುರು ಪಟ್ಟಾಧಿಕಾರ ಅಂಗವಾಗಿ ನಡೆದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘130 ವರ್ಷದಿಂದ ನಿಂತು ಹೋಗಿದ್ದ ಮಾಗಣಗೆರೆ ರುದ್ರಮುನೀಶ್ವರ ಹಿರೇಮಠಕ್ಕೆ ದಾನಯ್ಯ ದೇವರನ್ನು ನಿಯುಕ್ತಿಗೊಳಿಸಿ ಸಕಲ ಸದ್ಭಕ್ತರ ಸಮ್ಮುಖದಲ್ಲಿ ಪಟ್ಟಾಧಿಕಾರ ನೆರವೇರಿಸಿ ಏಕಾಕ್ಷರ ಶಿವಾಚಾರ್ಯ ಸ್ವಾಮೀಜಿ ಎಂಬ ಪಂಚ ಮುದ್ರಾ ಅನುಗ್ರಹಿಸಿ ಆಶೀರ್ವದಿಸಲಾಗಿದೆ’ ಎಂದರು.</p>.<p>ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಾತನಾಡಿ, ‘ವೀರಶೈವ ಧರ್ಮ ಅತ್ಯಂತ ಪ್ರಾಚೀನವಾದ ಧರ್ಮ. ಜೀವ ಶಿವನಾಗಲು, ಅಂಗ ಲಿಂಗವಾಗಲು, ನರ ಹರನಾಗಲು, ಭವಿ ಭಕ್ತನಾಗುವ ಸಾಧನಾ ಮಾರ್ಗವನ್ನು ಈ ಧರ್ಮದ ಸಂವಿಧಾನದಿಂದ ಅರಿಯಲು ಸಾಧ್ಯವಿದೆ’ ಎಂದರು.</p>.<p>ನೂತನ ಪಟ್ಟಾಧ್ಯಕ್ಷ ಏಕಾಕ್ಷರ ಶಿವಾಚಾರ್ಯ ಸ್ವಾಮೀಜಿ,‘ವೀರಶೈವ ಧರ್ಮ ಪರಂಪರೆಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಯೋಗ್ಯ ಗುರುವಿನಿಂದ ಭಕ್ತರ ಕಲ್ಯಾಣ ಸಾಧ್ಯ. ರಂಭಾಪುರಿ ಶ್ರೀಗಳ ಆಶೀರ್ವಾದ ಬಲದಿಂದ ಮಠದ ಭಕ್ತರಿಗೆ ಮಾರ್ಗದರ್ಶನ ಮಾಡುವ ಕಾರ್ಯ ಮಾಡುತ್ತೇನೆ ಎಂದರು.</p>.<p>ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ‘ಶಿವಪಥ ಅರಿಯಲು ಗುರುವಿನ ಮಾರ್ಗದರ್ಶನ ಮುಖ್ಯ. ಮಾಗಣಗೆರೆ ರುದ್ರಮುನೀಶ್ವರ ಹಿರೇಮಠಕ್ಕೆ ನೂತನ ಶ್ರೀಗಳವರು ಆಗಮಿಸಿರುವುದು ಈ ಭಾಗದ ಭಕ್ತರಿಗೆ ಬಹಳಷ್ಟು ಸಂತೋಷವಾಗಿದೆ ಎಂದರು.</p>.<p>ಮಾಗಣಗೆರೆ ಬೃಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆಲೂರು ಹಿರೇಮಠದ ಕೆಂಚವೃಷಭೇಂದ್ರ ಶಿವಾಚಾರ್ಯ, ಹಿರೇಮಠದ ವಿರೂಪಾಕ್ಷ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಬಡದಾಳ, ಸಿದ್ಧರಬೆಟ್ಟ, ನಾಗಣಸೂರು, ಕಾರಭೋಸಗಾ, ಶಖಾಪುರ, ಕಡಕೋಳ, ಆಲಮೇಲ, ಐನಾಪುರ, ಯಂಕಂಚಿ, ಕೊಣ್ಣೂರು ಶ್ರೀಗಳವರು ಉಪಸ್ಥಿತರಿದ್ದರು.</p>.<p>ಶಾಸಕ ಡಾ.ಅಜಯ ಸಿಂಗ್, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ, ಶಿವರಾಜ್ ಪಾಟೀಲ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ:</strong> ‘ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಸುಖ ಮತ್ತು ಶಾಂತಿಗೆ ಧರ್ಮ ಪರಿಪಾಲನೆ ಬಹಳ ಮುಖ್ಯ. ವೀರಶೈವ ಧರ್ಮದಲ್ಲಿ ಸಂಸ್ಕಾರಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಈ ನಾಡಿನ ಮಠಗಳು ಭಕ್ತರಿಗೆ ಸಂಸ್ಕಾರ ಕೊಡುವ ಜ್ಞಾನ ಕೇಂದ್ರಗಳಾಗಿವೆ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಹೇಳಿದರು.</p>.<p>ತಾಲ್ಲೂಕಿನ ಮಾಗಣಗೆರೆಯಲ್ಲಿ ಭಾನುವಾರ ರುದ್ರಮುನೀಶ್ವರ ಹಿರೇಮಠದ ಶ್ರೀಗುರು ಪಟ್ಟಾಧಿಕಾರ ಅಂಗವಾಗಿ ನಡೆದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘130 ವರ್ಷದಿಂದ ನಿಂತು ಹೋಗಿದ್ದ ಮಾಗಣಗೆರೆ ರುದ್ರಮುನೀಶ್ವರ ಹಿರೇಮಠಕ್ಕೆ ದಾನಯ್ಯ ದೇವರನ್ನು ನಿಯುಕ್ತಿಗೊಳಿಸಿ ಸಕಲ ಸದ್ಭಕ್ತರ ಸಮ್ಮುಖದಲ್ಲಿ ಪಟ್ಟಾಧಿಕಾರ ನೆರವೇರಿಸಿ ಏಕಾಕ್ಷರ ಶಿವಾಚಾರ್ಯ ಸ್ವಾಮೀಜಿ ಎಂಬ ಪಂಚ ಮುದ್ರಾ ಅನುಗ್ರಹಿಸಿ ಆಶೀರ್ವದಿಸಲಾಗಿದೆ’ ಎಂದರು.</p>.<p>ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಾತನಾಡಿ, ‘ವೀರಶೈವ ಧರ್ಮ ಅತ್ಯಂತ ಪ್ರಾಚೀನವಾದ ಧರ್ಮ. ಜೀವ ಶಿವನಾಗಲು, ಅಂಗ ಲಿಂಗವಾಗಲು, ನರ ಹರನಾಗಲು, ಭವಿ ಭಕ್ತನಾಗುವ ಸಾಧನಾ ಮಾರ್ಗವನ್ನು ಈ ಧರ್ಮದ ಸಂವಿಧಾನದಿಂದ ಅರಿಯಲು ಸಾಧ್ಯವಿದೆ’ ಎಂದರು.</p>.<p>ನೂತನ ಪಟ್ಟಾಧ್ಯಕ್ಷ ಏಕಾಕ್ಷರ ಶಿವಾಚಾರ್ಯ ಸ್ವಾಮೀಜಿ,‘ವೀರಶೈವ ಧರ್ಮ ಪರಂಪರೆಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಯೋಗ್ಯ ಗುರುವಿನಿಂದ ಭಕ್ತರ ಕಲ್ಯಾಣ ಸಾಧ್ಯ. ರಂಭಾಪುರಿ ಶ್ರೀಗಳ ಆಶೀರ್ವಾದ ಬಲದಿಂದ ಮಠದ ಭಕ್ತರಿಗೆ ಮಾರ್ಗದರ್ಶನ ಮಾಡುವ ಕಾರ್ಯ ಮಾಡುತ್ತೇನೆ ಎಂದರು.</p>.<p>ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ‘ಶಿವಪಥ ಅರಿಯಲು ಗುರುವಿನ ಮಾರ್ಗದರ್ಶನ ಮುಖ್ಯ. ಮಾಗಣಗೆರೆ ರುದ್ರಮುನೀಶ್ವರ ಹಿರೇಮಠಕ್ಕೆ ನೂತನ ಶ್ರೀಗಳವರು ಆಗಮಿಸಿರುವುದು ಈ ಭಾಗದ ಭಕ್ತರಿಗೆ ಬಹಳಷ್ಟು ಸಂತೋಷವಾಗಿದೆ ಎಂದರು.</p>.<p>ಮಾಗಣಗೆರೆ ಬೃಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆಲೂರು ಹಿರೇಮಠದ ಕೆಂಚವೃಷಭೇಂದ್ರ ಶಿವಾಚಾರ್ಯ, ಹಿರೇಮಠದ ವಿರೂಪಾಕ್ಷ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಬಡದಾಳ, ಸಿದ್ಧರಬೆಟ್ಟ, ನಾಗಣಸೂರು, ಕಾರಭೋಸಗಾ, ಶಖಾಪುರ, ಕಡಕೋಳ, ಆಲಮೇಲ, ಐನಾಪುರ, ಯಂಕಂಚಿ, ಕೊಣ್ಣೂರು ಶ್ರೀಗಳವರು ಉಪಸ್ಥಿತರಿದ್ದರು.</p>.<p>ಶಾಸಕ ಡಾ.ಅಜಯ ಸಿಂಗ್, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ, ಶಿವರಾಜ್ ಪಾಟೀಲ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>