‘ಒಬ್ಬ ಪಿಡಿಒ ಪಂಚಾಯಿತಿಗೆ ಬಂದು ಚಾರ್ಜ್ ತೆಗೆದುಕೊಂಡು, ಕೆಲಸ ಆರಂಭಿಸಲು ಕನಿಷ್ಠ ಎರಡು ತಿಂಗಳು ಬೇಕು. ಆದರೆ, ಪ್ರತಿ ಎರಡು ತಿಂಗಳಿಗೊಮ್ಮೆ ಅವರನ್ನು ಬದಲಾಯಿಸಿದರೆ ಅಭಿವೃದ್ಧಿ ಕೆಲಸ ಮಾಡಿಸುವುದಾದರೂ ಹೇಗೆ? ಮೇಲಧಿಕಾರಿಗಳ ಈ ಕ್ರಮ ಖಂಡಿಸಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಲು ಎಲ್ಲ ಸದಸ್ಯರೂ ಒಮ್ಮತರ ನಿರ್ಧಾರ ಕೈಗೊಂಡಿದ್ದೇವೆ. ಚುನಾವಣೆಗೂ ಮುಂಚೆಯೇ ಸಮಸ್ಯೆ ಸರಿಪಡಿಸಬೇಕು’ ಎಂದೂ ಆಗ್ರಹಿಸಿದರು.