ಕಲಬುರ್ಗಿ: ಇಲ್ಲಿಯ ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದಿಂದ ನೀಡುವ ಪ್ರಸಕ್ತ ಸಾಲಿನ‘ಡಾ.ಪಿ.ಎಸ್.ಶಂಕರ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿ’ಗೆ ಧಾರವಾಡದ ಮಕ್ಕಳ ತಜ್ಞ ಡಾ.ರಾಜನ್ ದೇಶಪಾಂಡೆ ಅವರನ್ನು ಆಯ್ಕೆಮಾಡಲಾಗಿದೆ.
ಈ ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ. ಜನವರಿ 1ರಂದು ಸಂಜೆ 5ಕ್ಕೆ ಇಲ್ಲಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಪ್ರತಿಷ್ಠಾನದ ವಾರ್ಷಿಕೋತ್ಸದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ. ನರೇಂದ್ರ ಬಡಶೇಷಿ ತಿಳಿಸಿದ್ದಾರೆ.