ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಪ್ರಶ್ನೆ ಸ್ಪರ್ಧೆ: ಗಡ್ಡಪರ್ತಿ ಮನಿಶಾ ಪ್ರಥಮ

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ: ಪಿಐಡಿಪಿಐ ಅಡಿಯಲ್ಲಿ ದೂರು ಸಲ್ಲಿಸಲು ಅವಕಾಶ
Published 16 ನವೆಂಬರ್ 2023, 14:26 IST
Last Updated 16 ನವೆಂಬರ್ 2023, 14:26 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕ್ಷೇತ್ರೀಯ ಕಾರ್ಯಾಲಯದಲ್ಲಿ ವಿಚಕ್ಷಣಾ ಜಾಗೃತಿ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು.

ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ನಿಬಂಧ ಸ್ಪರ್ಧೆ ಹಾಗೂ ಸಿಬ್ಬಂದಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ರಸಪ್ರಶ್ನೆ ಸ್ಪರ್ಧೆಯಲ್ಲಿ ಗಡ್ಡಪರ್ತಿ ಮನಿಶಾ ಪ್ರಥಮ ಸ್ಥಾನ, ಪ್ರಶಾಂತ ತಮದಡ್ಡಿ‌ ದ್ವಿತೀಯ ಸ್ಥಾನ ಹಾಗೂ ಸುಜಯ ಬಿಸ್ವಾಸ್ ತೃತೀಯ ಸ್ಥಾನ ಪಡೆದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ರವಿ ಯಾದವ, ‘ಕೇಂದ್ರ ಸರ್ಕಾರವು ಸಾರ್ವಜನಿಕ ಹಿತಾಸಕ್ತಿ ಬಹಿರಂಗಪಡಿಸುವಿಕೆ ಮತ್ತು ಮಾಹಿತಿದಾರರ ರಕ್ಷಣೆ(ಪಿಐಡಿಪಿಐ) ನಿರ್ಣಯದ ಅಡಿಯಲ್ಲಿ ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ರಚಿಸಿದೆ. ಇದು ಸಾರ್ವಜನಿಕರಿಂದ ಭ್ರಷ್ಟಾಚಾರದ ಲಿಖಿತ ದೂರುಗಳನ್ನು ಸ್ವೀಕರಿಸಿ ಅಧಿಕಾರಿಗಳ ವಿರುದ್ಧ ಕ್ರಮವಹಿಸುತ್ತದೆ. ಇದರಲ್ಲಿ ದೂರು ಸಲ್ಲಿಸುವವರ ಗುರುತನ್ನು ಗೋಪ್ಯವಾಗಿಡಲಾಗುತ್ತದೆ’ ಎಂದರು.

ಕಾರ್ಯಕ್ರಮದಲ್ಲಿ ವಿಠ್ಠಲ, ಮೊಹ್ಮದ್ ಅರ್ಸ್ಲಾನ್, ಪ್ರಶಾಂತ ಇಂಗಳೇಶ್ವರ, ಜಗನ್ನಾಥ, ಕೇಶವರಾವ ಕುಲಕರ್ಣಿ, ಪ್ರತಿಭಾ, ಸವಿತಾ, ಅರುಣಕುಮಾರ, ಜಮೀಲ್ ಅಹ್ಮದ್ ಇದ್ದರು. ಮದನ ಕುಲಕರ್ಣಿ ನಿರೂಪಿಸಿದರು. ಬಸವರಾಜ ಹೆಳವರ ಸ್ವಾಗತಿಸಿದರು. ಸುಜಯ ಬಿಸ್ವಾಸ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT