<p>ಹುಬ್ಬಳ್ಳಿ: ವಿಜಯಪುರ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಬಿರುಸಿನ ಮಳೆ ಸುರಿಯಿತು. ಬಹುತೇಕ ಕಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.</p>.<p>ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಮಸೂತಿ ಮತ್ತು ಕುಬಕಡ್ಡಿ ಗ್ರಾಮದಲ್ಲಿ ಸಾವಿರಾರು ಬಾಳೆ ಗಿಡ ಗಳು ನೆಲಕ್ಕಚ್ಚಿದವು. ಕೊಲ್ಹಾರ ಪಟ್ಟಣದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾದರೆ, ಹಳೇರೊಳ್ಳಿ ಗ್ರಾಮ ದಲ್ಲಿ ಬೃಹತ್ ಆಲದ ಮರ ಬಿದ್ದು 2 ಎಮ್ಮೆಗಳು ಮೃತಪಟ್ಟಿವೆ. ಹಲವು ಮನೆಗಳ ಚಾವಣಿ ಗಾಳಿಗೆ ಹಾರಿ ಹೋಗಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.</p>.<p>ಸೇಡಂ–ಸಿಡಿಲಿಗೆ ವ್ಯಕ್ತಿ, ಎತ್ತು ಬಲಿ: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ ಸಿಡಿಲು ಬಡಿದು ತಾಲ್ಲೂಕಿನ ಜಾಕನಪಲ್ಲಿ ಗ್ರಾಮದ ಆಶಪ್ಪ ಕಂಪಿನ್ (60) ಮೃತಪಟ್ಟರು. ಗ್ರಾಮದ ಮನೆಯ ದೂರದಲ್ಲಿರುವ ದೊಡ್ಡಿಯಲ್ಲಿ ಕಟ್ಟಿದ ಎತ್ತಿಗೆ ಸಿಡಿಲು ಬಡಿದಿದ್ದರಿಂದ ಎತ್ತು ಮೃತಪಟ್ಟಿದೆ. ಚಂದ್ರಪ್ಪ ಪುಲಮೋರ್ ಅವರಿಗೆ ಸೇರಿದ ಎತ್ತು ಇದಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1241106957</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ವಿಜಯಪುರ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಬಿರುಸಿನ ಮಳೆ ಸುರಿಯಿತು. ಬಹುತೇಕ ಕಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.</p>.<p>ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಮಸೂತಿ ಮತ್ತು ಕುಬಕಡ್ಡಿ ಗ್ರಾಮದಲ್ಲಿ ಸಾವಿರಾರು ಬಾಳೆ ಗಿಡ ಗಳು ನೆಲಕ್ಕಚ್ಚಿದವು. ಕೊಲ್ಹಾರ ಪಟ್ಟಣದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾದರೆ, ಹಳೇರೊಳ್ಳಿ ಗ್ರಾಮ ದಲ್ಲಿ ಬೃಹತ್ ಆಲದ ಮರ ಬಿದ್ದು 2 ಎಮ್ಮೆಗಳು ಮೃತಪಟ್ಟಿವೆ. ಹಲವು ಮನೆಗಳ ಚಾವಣಿ ಗಾಳಿಗೆ ಹಾರಿ ಹೋಗಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.</p>.<p>ಸೇಡಂ–ಸಿಡಿಲಿಗೆ ವ್ಯಕ್ತಿ, ಎತ್ತು ಬಲಿ: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ ಸಿಡಿಲು ಬಡಿದು ತಾಲ್ಲೂಕಿನ ಜಾಕನಪಲ್ಲಿ ಗ್ರಾಮದ ಆಶಪ್ಪ ಕಂಪಿನ್ (60) ಮೃತಪಟ್ಟರು. ಗ್ರಾಮದ ಮನೆಯ ದೂರದಲ್ಲಿರುವ ದೊಡ್ಡಿಯಲ್ಲಿ ಕಟ್ಟಿದ ಎತ್ತಿಗೆ ಸಿಡಿಲು ಬಡಿದಿದ್ದರಿಂದ ಎತ್ತು ಮೃತಪಟ್ಟಿದೆ. ಚಂದ್ರಪ್ಪ ಪುಲಮೋರ್ ಅವರಿಗೆ ಸೇರಿದ ಎತ್ತು ಇದಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1241106957</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>