<p><strong>ಕಲಬುರ್ಗಿ: </strong>ತಾಲ್ಲೂಕಿನ ಹಾಗರಗುಂಡಗಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಗ್ರಾಮಸ್ಥರು ಭಾನುವಾರ ಬೆಳಿಗ್ಗೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.</p>.<p>ಹಾಗರಗುಂಡಗಿಯಿಂದ ಜನರು ನಿತ್ಯ ಕಲಬುರ್ಗಿಗೆ ಬಂದು ಹೋಗುತ್ತಾರೆ. ಕೆಲಸದ ನಿಮಿತ್ತ, ಸರ್ಕಾರಿ ನೌಕರಿ, ಶಾಲಾ ಕಾಲೇಜು ಸೇರಿ ಪ್ರತಿಯೊಂದಕ್ಕೂ ಗ್ರಾಮಸ್ಥರು ಕಲಬುರ್ಗಿ ಮೇಲೆ ಅವಲಂಬಿತರಾಗಿದ್ದಾರೆ. ಈ ಮುಂಚೆ ಗ್ರಾಮದಿಂದ ಒಂದು ಬಸ್ ಕಲಬುರ್ಗಿಗೆ ಓಡಿಸಲಾಗುತಿತ್ತು. ಆದರೆ, ಲಾಕ್ಡೌನ್ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/district/kalaburagi/re-actions-off-warrior-797065.html" itemprop="url">ಮೊದಲು ಲಸಿಕೆ ಪಡೆದವರ ಮನದಾಳ </a></p>.<p>ಬಸ್ ಇಲ್ಲದೆ ನಿತ್ಯ ಗೋಳಾಟ ನಡೆದಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಾರಿಗೆ ಸಂಸ್ಥೆ ಅಧಿಕಾರಿಗಳು ಸ್ಪಂದಿಸದ ಕಾರಣ ಬೆಳಿಗ್ಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರು. ಪಕ್ಕದ ಮೈನಾಳ ಗ್ರಾಮಕ್ಕೆ ತೆರಳಿದ್ದ ಬಸ್ ತಡೆದು ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ತಾಲ್ಲೂಕಿನ ಹಾಗರಗುಂಡಗಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಗ್ರಾಮಸ್ಥರು ಭಾನುವಾರ ಬೆಳಿಗ್ಗೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.</p>.<p>ಹಾಗರಗುಂಡಗಿಯಿಂದ ಜನರು ನಿತ್ಯ ಕಲಬುರ್ಗಿಗೆ ಬಂದು ಹೋಗುತ್ತಾರೆ. ಕೆಲಸದ ನಿಮಿತ್ತ, ಸರ್ಕಾರಿ ನೌಕರಿ, ಶಾಲಾ ಕಾಲೇಜು ಸೇರಿ ಪ್ರತಿಯೊಂದಕ್ಕೂ ಗ್ರಾಮಸ್ಥರು ಕಲಬುರ್ಗಿ ಮೇಲೆ ಅವಲಂಬಿತರಾಗಿದ್ದಾರೆ. ಈ ಮುಂಚೆ ಗ್ರಾಮದಿಂದ ಒಂದು ಬಸ್ ಕಲಬುರ್ಗಿಗೆ ಓಡಿಸಲಾಗುತಿತ್ತು. ಆದರೆ, ಲಾಕ್ಡೌನ್ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/district/kalaburagi/re-actions-off-warrior-797065.html" itemprop="url">ಮೊದಲು ಲಸಿಕೆ ಪಡೆದವರ ಮನದಾಳ </a></p>.<p>ಬಸ್ ಇಲ್ಲದೆ ನಿತ್ಯ ಗೋಳಾಟ ನಡೆದಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಾರಿಗೆ ಸಂಸ್ಥೆ ಅಧಿಕಾರಿಗಳು ಸ್ಪಂದಿಸದ ಕಾರಣ ಬೆಳಿಗ್ಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರು. ಪಕ್ಕದ ಮೈನಾಳ ಗ್ರಾಮಕ್ಕೆ ತೆರಳಿದ್ದ ಬಸ್ ತಡೆದು ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>