‘ಹುಬ್ಬಳ್ಳಿ– ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಸಚಿವ ಜಗದೀಶ ಶೆಟ್ಟರ್ ಅವರಿಗೆ ವಿನಯ ಕುಲಕರ್ಣಿ ಅವರು ರಾಜಕೀಯವಾಗಿ ಮುಳುವಾಗಿದ್ದಾರೆ. ನೇರವಾಗಿ ಅವರನ್ನು ಎದುರಿಸುವ ಶಕ್ತಿ ಇಲ್ಲದೇ ಈ ರೀತಿ ಮಟ್ಟ ಹಾಕಲು ಪಿತೂರಿ ನಡೆಸಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬರುವಂತೆ ವಿನಯ ಕುಲಕರ್ಣಿ ಅವರಿಗೆ ಆಹ್ವಾನ ನೀಡಿದ್ದರು. ಆದರೆ, ಅವರು ನಿರಾಕರಿಸಿದ್ದರಿಂದ ಉದ್ದೇಶಪೂರ್ವಕವಾಗಿ ಈಗ ಸಿಬಿಐ ದಾಳಿ ನಡೆಸಿ, ಬಂಧಿಸುವಂತೆ ಮಾಡಿದ್ದಾರೆ’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.