<p><strong>ಕಲಬುರಗಿ</strong>: ‘ಕೇಂದ್ರ ಸರ್ಕಾರವು ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತಿದೆ’ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಂಚಲಕ ಮಹಮ್ಮುದ್ ಅಸಗರ್ ಚುಲ್ಬುಲ್ ಹೇಳಿದರು.</p>.<p>‘ಆಡಳಿತರೂಢ ಬಿಜೆಪಿ ತನ್ನ ಸಂಖ್ಯಾ ಬಲವನ್ನು ಬಳಸಿಕೊಂಡು, ಲಕ್ಷಾಂತರ ಮುಸ್ಲಿಮರು ಹಾಗೂ ಅಲ್ಪಸಂಖ್ಯಾತರ ಇಚ್ಛೆಗೆ ವಿರುದ್ಧವಾಗಿ ವಕ್ಫ್ ಕಾಯ್ದೆಗೆ ಅನಿಯಂತ್ರಿತ ತಿದ್ದುಪಡಿ ಮಾಡಿ ಅಂಗೀಕರಿಸಿದೆ. ನಾವು ಈ ತಿದ್ದುಪಡಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ದೇಶದಾದ್ಯಂತ ಲಕ್ಷಾಂತರ ಮುಸ್ಲಿಮರು ವಕ್ಫ್ ತಿದ್ದುಪಡಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರಿಗೆ ಇ–ಮೇಲ್ಗಳನ್ನು ಕಳುಹಿಸಿದ್ದಾರೆ. ಆದರೂ ಪ್ರಜಾಪ್ರಭುತ್ವ ಮತ್ತು ಸಂಸದೀಯ ಮಾನದಂಡಗಳನ್ನು ಧಿಕ್ಕರಿಸಿ, ಆಕ್ಷೇಪಣೆಗಳನ್ನು ನಿರ್ಲಕ್ಷಿಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.</p>.<p>ರಾಜ್ಯ ಸಮಿತಿಯ ಸಂಚಾಲಕ ಸುಲೇಮಾನ್ ಖಾನ್ ಮಾತನಾಡಿ, ‘ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ. ಈಗ ಇದನ್ನು ಜನರ ನಡುವೆ ತೆಗೆದುಕೊಂಡು ಹೋಗುತ್ತಿದ್ದೇವೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಜಾಕೀರ್ ಹುಸೇನ್, ಮೌಲಾನಾ ಫಕ್ರೊದ್ದೀನ್, ಮೌಲಾನಾ ಅಜಮತ್ ಫಾರೂಕಿ, ಮೌಲಾನಾ ಗೌಸುದ್ದೀನ್ ಖಾಸಿಂ, ರಿಜ್ವಾನ್ ಸಿದ್ದೀಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಕೇಂದ್ರ ಸರ್ಕಾರವು ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತಿದೆ’ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಂಚಲಕ ಮಹಮ್ಮುದ್ ಅಸಗರ್ ಚುಲ್ಬುಲ್ ಹೇಳಿದರು.</p>.<p>‘ಆಡಳಿತರೂಢ ಬಿಜೆಪಿ ತನ್ನ ಸಂಖ್ಯಾ ಬಲವನ್ನು ಬಳಸಿಕೊಂಡು, ಲಕ್ಷಾಂತರ ಮುಸ್ಲಿಮರು ಹಾಗೂ ಅಲ್ಪಸಂಖ್ಯಾತರ ಇಚ್ಛೆಗೆ ವಿರುದ್ಧವಾಗಿ ವಕ್ಫ್ ಕಾಯ್ದೆಗೆ ಅನಿಯಂತ್ರಿತ ತಿದ್ದುಪಡಿ ಮಾಡಿ ಅಂಗೀಕರಿಸಿದೆ. ನಾವು ಈ ತಿದ್ದುಪಡಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ದೇಶದಾದ್ಯಂತ ಲಕ್ಷಾಂತರ ಮುಸ್ಲಿಮರು ವಕ್ಫ್ ತಿದ್ದುಪಡಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರಿಗೆ ಇ–ಮೇಲ್ಗಳನ್ನು ಕಳುಹಿಸಿದ್ದಾರೆ. ಆದರೂ ಪ್ರಜಾಪ್ರಭುತ್ವ ಮತ್ತು ಸಂಸದೀಯ ಮಾನದಂಡಗಳನ್ನು ಧಿಕ್ಕರಿಸಿ, ಆಕ್ಷೇಪಣೆಗಳನ್ನು ನಿರ್ಲಕ್ಷಿಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.</p>.<p>ರಾಜ್ಯ ಸಮಿತಿಯ ಸಂಚಾಲಕ ಸುಲೇಮಾನ್ ಖಾನ್ ಮಾತನಾಡಿ, ‘ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ. ಈಗ ಇದನ್ನು ಜನರ ನಡುವೆ ತೆಗೆದುಕೊಂಡು ಹೋಗುತ್ತಿದ್ದೇವೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಜಾಕೀರ್ ಹುಸೇನ್, ಮೌಲಾನಾ ಫಕ್ರೊದ್ದೀನ್, ಮೌಲಾನಾ ಅಜಮತ್ ಫಾರೂಕಿ, ಮೌಲಾನಾ ಗೌಸುದ್ದೀನ್ ಖಾಸಿಂ, ರಿಜ್ವಾನ್ ಸಿದ್ದೀಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>