<p><strong>ಕಲಬುರಗಿ:</strong> ‘ವಿಶ್ವಕರ್ಮ ಸಮಾಜದವರು ಒಗ್ಗಟ್ಟು ಪ್ರದರ್ಶನ ಮಾಡಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಅಫಜಲಪುರದ ಪ್ರಣವನಿರಂಜನ ಸ್ವಾಮೀಜಿ ಹೇಳಿದರು.</p>.<p>ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದವರು ಧರ್ಮದ ಕಾಲಂನಲ್ಲಿ ‘ಹಿಂದೂ’, ಜಾತಿ ಕಾಲಂನಲ್ಲಿ ‘ವಿಶ್ವಕರ್ಮ’ ಎಂದು ಬರೆಸಬೇಕು’ ಎಂದು ಸಲಹೆ ನೀಡಿದರು.</p>.<p>ಸುಲೇಪೇಟದ ದೊಡ್ಡೇಂದ್ರ ಸ್ವಾಮೀಜಿ ಮಾತನಾಡಿ, ‘ಶರಣರು, ಸಂತರು ಯಾವುದೇ ಒಂದು ಜಾತಿಗೆ ಸೀಮಿತರಲ್ಲ’ ಎಂದು ಹೇಳಿದರು.</p>.<p>ಸಮಾಜದ ಮುಖಂಡ ಗುಂಡಪ್ಪ ಡಿ.ವಿಶ್ವಕರ್ಮ ವಿಶೇಷ ಉಪನ್ಯಾಸ ನೀಡಿದರು. ಕಲಬುರಗಿ– ಯಾದಗಿರಿ ವಿಶ್ವಕರ್ಮ ಏಕದಂಡಗಿ ನರಸಿಂಹ ಮಠದ ಸುರೇಂದ್ರ ಸ್ವಾಮೀಜಿ, ಸೊಂತ ಶರಣ ಶಂಕರಲಿಂಗ ಮಹಾರಾಜರು, ನಾಗೇಶ ಮುತ್ಯಾ ಗಣಜಲಖೇಡ, ಬೀದರ್ನ ಸಿದ್ದೇಶ್ವರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಶಿವರಾಜ ಶಾಸ್ತ್ರಿ ಕುಸನೂರ, ವಿಶ್ವಕರ್ಮ ಸಮಾಜದ ಅಧ್ಯಕ್ಷ ವೀರಣ್ಣ ಮುತ್ಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಜಗದೀಶ್ವರಿ ಅ.ನಾಶಿ, ಚುನಾವಣಾ ತಹಶೀಲ್ದಾರ್ ಪಂಪಯ್ಯ, ಶಿವಶರಣಪ್ಪ ಧನ್ನಿ ಉಪಸ್ಥಿತರಿದ್ದರು. ಸೂರ್ಯಕಾಂತ ಬಡಿಗೇರ ನಿರೂಪಿಸಿದರು.</p>.<p>ವರ್ಷಿಣಿ ಆರ್.ವಿಶ್ವಕರ್ಮ, ಅವನಿ ಪಂಚಾಳ ಅವರ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಸಮಾರಂಭಕ್ಕೂ ಮುನ್ನ ನಗರದ ಸಂತ್ರಾಸವಾಡಿಯಲ್ಲಿನ ಕಾಳಿಕಾದೇವಿ ದೇವಸ್ಥಾನದಿಂದ ರಂಗಮಂದಿರದ ವರೆಗೆ ಭಗವಾನ್ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ವಿಶ್ವಕರ್ಮ ಸಮಾಜದವರು ಒಗ್ಗಟ್ಟು ಪ್ರದರ್ಶನ ಮಾಡಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಅಫಜಲಪುರದ ಪ್ರಣವನಿರಂಜನ ಸ್ವಾಮೀಜಿ ಹೇಳಿದರು.</p>.<p>ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದವರು ಧರ್ಮದ ಕಾಲಂನಲ್ಲಿ ‘ಹಿಂದೂ’, ಜಾತಿ ಕಾಲಂನಲ್ಲಿ ‘ವಿಶ್ವಕರ್ಮ’ ಎಂದು ಬರೆಸಬೇಕು’ ಎಂದು ಸಲಹೆ ನೀಡಿದರು.</p>.<p>ಸುಲೇಪೇಟದ ದೊಡ್ಡೇಂದ್ರ ಸ್ವಾಮೀಜಿ ಮಾತನಾಡಿ, ‘ಶರಣರು, ಸಂತರು ಯಾವುದೇ ಒಂದು ಜಾತಿಗೆ ಸೀಮಿತರಲ್ಲ’ ಎಂದು ಹೇಳಿದರು.</p>.<p>ಸಮಾಜದ ಮುಖಂಡ ಗುಂಡಪ್ಪ ಡಿ.ವಿಶ್ವಕರ್ಮ ವಿಶೇಷ ಉಪನ್ಯಾಸ ನೀಡಿದರು. ಕಲಬುರಗಿ– ಯಾದಗಿರಿ ವಿಶ್ವಕರ್ಮ ಏಕದಂಡಗಿ ನರಸಿಂಹ ಮಠದ ಸುರೇಂದ್ರ ಸ್ವಾಮೀಜಿ, ಸೊಂತ ಶರಣ ಶಂಕರಲಿಂಗ ಮಹಾರಾಜರು, ನಾಗೇಶ ಮುತ್ಯಾ ಗಣಜಲಖೇಡ, ಬೀದರ್ನ ಸಿದ್ದೇಶ್ವರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಶಿವರಾಜ ಶಾಸ್ತ್ರಿ ಕುಸನೂರ, ವಿಶ್ವಕರ್ಮ ಸಮಾಜದ ಅಧ್ಯಕ್ಷ ವೀರಣ್ಣ ಮುತ್ಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಜಗದೀಶ್ವರಿ ಅ.ನಾಶಿ, ಚುನಾವಣಾ ತಹಶೀಲ್ದಾರ್ ಪಂಪಯ್ಯ, ಶಿವಶರಣಪ್ಪ ಧನ್ನಿ ಉಪಸ್ಥಿತರಿದ್ದರು. ಸೂರ್ಯಕಾಂತ ಬಡಿಗೇರ ನಿರೂಪಿಸಿದರು.</p>.<p>ವರ್ಷಿಣಿ ಆರ್.ವಿಶ್ವಕರ್ಮ, ಅವನಿ ಪಂಚಾಳ ಅವರ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಸಮಾರಂಭಕ್ಕೂ ಮುನ್ನ ನಗರದ ಸಂತ್ರಾಸವಾಡಿಯಲ್ಲಿನ ಕಾಳಿಕಾದೇವಿ ದೇವಸ್ಥಾನದಿಂದ ರಂಗಮಂದಿರದ ವರೆಗೆ ಭಗವಾನ್ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>