ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಕೇಂದ್ರ ಪರಿಶೀಲನೆ

Last Updated 19 ಏಪ್ರಿಲ್ 2021, 4:54 IST
ಅಕ್ಷರ ಗಾತ್ರ

ಕಲಬುರ್ಗಿ: ಚಿಂಚೋಳಿಯ ತಾಲ್ಲೂಕು ಆಸ್ಪತ್ರೆಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಲಾಗಿರುವ ಕೊರೊನಾ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ್ ವೈಜನಾಥ ಪಾಟೀಲ ಭೇಟಿ ನೀಡಿ, ಪರಿಶೀಲಿಸಿದರು.

ತಾಲ್ಲೂಕಿಗೆ ಬಂದಿರುವ ಆಮ್ಲಜನಕ ತಯಾರಿಕಾ ಘಟಕವನ್ನು ಅತಿಶೀಘ್ರದಲ್ಲಿ ಪ್ರಾರಂಭಿಸಿ ರೋಗಿಗಳಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು. ಕೆಲವೇ ದಿನಗಳಲ್ಲಿ ಕೊರೊನಾ ಕೇಂದ್ರ ಪ್ರಾರಂಭಿಸಲಾಗುವುದು ಎಂದರು.

ಅಂಬೇಡ್ಕರ್ ಹಾಗೂ ದೇವರಾಜ ಅರಸು ವಸತಿ ನಿಲಯಗಳನ್ನು ಕೋವಿಡ್‌ ಕೇಂದ್ರಗಳಾಗಿ ಪರಿವರ್ತಿಸುವಂತೆ ಸೂಚಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಗಡಂತಿ, ಭವಾನಿ ರಾವ್ ಪಾಟೀಲ, ಶೇಷಗಿರಿ ಕಳಸಕರ, ಜಗದೀಶ್ ಠಾಕೂರ್, ಸಂತೋಷ ರೆಡ್ಡಿ, ಚಂದ್ರಪ್ಪ ಚಂದನಕೇರ, ರವಿ ಪಾಟೀಲ ಶಾದಿಪುರ, ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಡಿ. ಗಫರ್, ಡಾ.ಸಂತೋಷ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT