<p><strong>ಸೇಡಂ</strong>: ತಾಲ್ಲೂಕಿನ ಹೂಡಾ(ಬಿ) ಗ್ರಾಮದಲ್ಲಿ ವಾಂತಿ-ಭೇದಿಯಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೇರಿ ಏಳು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮಮತಾ ಹಣಮಂತ ಜೋಗುರ (5) ಎಂಬ ಮಗು ಮೃತಪಟ್ಟಿದೆ. ಗ್ರಾಮದಲ್ಲಿ ಪೂರೈಕೆಯಾಗುವ ಕಲುಷಿತ ನೀರು ಕುಡಿದು ಮಗು ಮೃತಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮಗು ಮೃತಪಟ್ಟಿದ್ದು, ಸಾವಿಗೆ ಕಾರಣ ನಿಖರವಾಗಿ ಹೇಳಲಾಗುವುದಿಲ್ಲ ಎನ್ನುತ್ತಾರೆ ಆಸ್ಪತ್ರೆಯ ವೈದ್ಯರು. ಬುಧವಾರ ನಸುಕಿನ ಜಾವ ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೂಡಾ(ಬಿ) ಗ್ರಾಮದ ಮಳಖೇಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಬಸಣ್ಣ ಜಮಾದರ, ಐವರು ಮಕ್ಕಳು ಸೇರಿದಂತೆ ಒಟ್ಟು ಏಳು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಳಖೇಡನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 6 ಜನ ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p><strong>ಗ್ರಾಮಕ್ಕೆ ಅಧಿಕಾರಿಗಳ ಭೇಟಿ</strong>:</p><p> ವಾಂತಿ-ಭೇದಿ ಪ್ರಕರಣ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ್ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನೀರಿನ ವ್ಯವಸ್ಥೆ ಪರಿಶೀಲಿಸಿದರು.</p>.<p><strong>ಜಿಲ್ಲಾ ಆಸ್ಪತ್ರೆಗೆ ಮಾಜಿ ಶಾಸಕ ತೇಲ್ಕೂರ ಭೇಟಿ:</strong></p>.<p>‘ಸೇಡಂ ತಾಲ್ಲೂಕಿನ ಹೂಡಾ (ಬಿ) ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷವೇ ಕಾರಣ’ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದ್ದಾರೆ.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ‘ಜಿಮ್ಸ್ ವೈದ್ಯಾಧಿಕಾರಿ ಡಾ.ಶಿವಕುಮಾರ ಅವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ. ಕುಡಿಯುವ ನೀರಿನಿಂದ ಈ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಕುರಿತು ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲದಂತೆ ಕಾಣುತ್ತಿದೆ’ ಎಂದು ಕಿಡಿಕಾರಿದರು.</p>.<p>ಸಚಿವ ಡಾ.ಶರಣಪ್ರಕಾಶ ನಾಪತ್ತೆ: ‘ಕಳೆದ ಎರಡು ದಿನಗಳಿಂದ ಜನರು ಅನಾರೋಗ್ಯದಿಂದ ಆತಂಕಪಡುತ್ತ ಆಸ್ಪತ್ರೆಗೆ ದಾಖಲಾಗುತ್ತಿದ್ದರೆ, ಕ್ಷೇತ್ರದ ಶಾಸಕರು, ಸಚಿವ ಡಾ.ಶರಣಪ್ರಕಾಶ ಪಾಟೀಲ ತಲೆ ಕೆಡಿಸಿಕೊಳ್ಳದಂತೆ ಕಾಣುತ್ತಿದೆ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ತೇಲ್ಕೂರ ಆಗ್ರಹಿಸಿದ್ದಾರೆ.</p>.<p><strong>ಟ್ಯಾಂಕ್ ಸ್ವಚ್ಛಗೊಳಿಸಲ್ಲ: ಗ್ರಾಮಸ್ಥರ ಆರೋಪ </strong></p><p>ಗ್ರಾಮಕ್ಕೆ ನೀರು ಪೂರೈಸುವ ನೀರಿನ ಟ್ಯಾಂಕ್ಗೆ ಕಾಗಿಣಾ ನದಿ ನೀರನ್ನು ತುಂಬಲಾಗುತ್ತದೆ. ನಂತರ ಆ ನೀರನ್ನು ಗ್ರಾಮದ ನಳಗಳಿಗೆ ಪೂರೈಸಲಾಗುತ್ತದೆ. ಕುಡಿಯುವ ನೀರಿನ ಟ್ಯಾಂಕ್ ಅನ್ನು ಆಗಾಗ ಸ್ವಚ್ಛಗೊಳಿಸಬೇಕು. ಅಲ್ಲದೆ ಟ್ಯಾಂಕ್ಗೆ ಮುಚ್ಚಳಿಕೆಯೇ ಇಲ್ಲ. ಆಗಾಗ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛತೆ ಕಡೆಗೆ ಗಮನ ಹರಿಸುವಂತೆ ಜಾಗೃತಿ ಮೂಡಿಸಬೇಕಾದ ಅಧಿಕಾರಿಗಳು ಯಾವುದನ್ನೂ ಮಾಡುತ್ತಿಲ್ಲ. ಟ್ಯಾಂಕ್ ಸ್ವಚ್ಛಗೊಳಿಸದಿರುವುದಕ್ಕೆ ವಾಂತಿ-ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ</strong>: ತಾಲ್ಲೂಕಿನ ಹೂಡಾ(ಬಿ) ಗ್ರಾಮದಲ್ಲಿ ವಾಂತಿ-ಭೇದಿಯಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೇರಿ ಏಳು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮಮತಾ ಹಣಮಂತ ಜೋಗುರ (5) ಎಂಬ ಮಗು ಮೃತಪಟ್ಟಿದೆ. ಗ್ರಾಮದಲ್ಲಿ ಪೂರೈಕೆಯಾಗುವ ಕಲುಷಿತ ನೀರು ಕುಡಿದು ಮಗು ಮೃತಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮಗು ಮೃತಪಟ್ಟಿದ್ದು, ಸಾವಿಗೆ ಕಾರಣ ನಿಖರವಾಗಿ ಹೇಳಲಾಗುವುದಿಲ್ಲ ಎನ್ನುತ್ತಾರೆ ಆಸ್ಪತ್ರೆಯ ವೈದ್ಯರು. ಬುಧವಾರ ನಸುಕಿನ ಜಾವ ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೂಡಾ(ಬಿ) ಗ್ರಾಮದ ಮಳಖೇಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಬಸಣ್ಣ ಜಮಾದರ, ಐವರು ಮಕ್ಕಳು ಸೇರಿದಂತೆ ಒಟ್ಟು ಏಳು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಳಖೇಡನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 6 ಜನ ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ಮರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p><strong>ಗ್ರಾಮಕ್ಕೆ ಅಧಿಕಾರಿಗಳ ಭೇಟಿ</strong>:</p><p> ವಾಂತಿ-ಭೇದಿ ಪ್ರಕರಣ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ್ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನೀರಿನ ವ್ಯವಸ್ಥೆ ಪರಿಶೀಲಿಸಿದರು.</p>.<p><strong>ಜಿಲ್ಲಾ ಆಸ್ಪತ್ರೆಗೆ ಮಾಜಿ ಶಾಸಕ ತೇಲ್ಕೂರ ಭೇಟಿ:</strong></p>.<p>‘ಸೇಡಂ ತಾಲ್ಲೂಕಿನ ಹೂಡಾ (ಬಿ) ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷವೇ ಕಾರಣ’ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದ್ದಾರೆ.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ‘ಜಿಮ್ಸ್ ವೈದ್ಯಾಧಿಕಾರಿ ಡಾ.ಶಿವಕುಮಾರ ಅವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ. ಕುಡಿಯುವ ನೀರಿನಿಂದ ಈ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಕುರಿತು ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲದಂತೆ ಕಾಣುತ್ತಿದೆ’ ಎಂದು ಕಿಡಿಕಾರಿದರು.</p>.<p>ಸಚಿವ ಡಾ.ಶರಣಪ್ರಕಾಶ ನಾಪತ್ತೆ: ‘ಕಳೆದ ಎರಡು ದಿನಗಳಿಂದ ಜನರು ಅನಾರೋಗ್ಯದಿಂದ ಆತಂಕಪಡುತ್ತ ಆಸ್ಪತ್ರೆಗೆ ದಾಖಲಾಗುತ್ತಿದ್ದರೆ, ಕ್ಷೇತ್ರದ ಶಾಸಕರು, ಸಚಿವ ಡಾ.ಶರಣಪ್ರಕಾಶ ಪಾಟೀಲ ತಲೆ ಕೆಡಿಸಿಕೊಳ್ಳದಂತೆ ಕಾಣುತ್ತಿದೆ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ತೇಲ್ಕೂರ ಆಗ್ರಹಿಸಿದ್ದಾರೆ.</p>.<p><strong>ಟ್ಯಾಂಕ್ ಸ್ವಚ್ಛಗೊಳಿಸಲ್ಲ: ಗ್ರಾಮಸ್ಥರ ಆರೋಪ </strong></p><p>ಗ್ರಾಮಕ್ಕೆ ನೀರು ಪೂರೈಸುವ ನೀರಿನ ಟ್ಯಾಂಕ್ಗೆ ಕಾಗಿಣಾ ನದಿ ನೀರನ್ನು ತುಂಬಲಾಗುತ್ತದೆ. ನಂತರ ಆ ನೀರನ್ನು ಗ್ರಾಮದ ನಳಗಳಿಗೆ ಪೂರೈಸಲಾಗುತ್ತದೆ. ಕುಡಿಯುವ ನೀರಿನ ಟ್ಯಾಂಕ್ ಅನ್ನು ಆಗಾಗ ಸ್ವಚ್ಛಗೊಳಿಸಬೇಕು. ಅಲ್ಲದೆ ಟ್ಯಾಂಕ್ಗೆ ಮುಚ್ಚಳಿಕೆಯೇ ಇಲ್ಲ. ಆಗಾಗ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛತೆ ಕಡೆಗೆ ಗಮನ ಹರಿಸುವಂತೆ ಜಾಗೃತಿ ಮೂಡಿಸಬೇಕಾದ ಅಧಿಕಾರಿಗಳು ಯಾವುದನ್ನೂ ಮಾಡುತ್ತಿಲ್ಲ. ಟ್ಯಾಂಕ್ ಸ್ವಚ್ಛಗೊಳಿಸದಿರುವುದಕ್ಕೆ ವಾಂತಿ-ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>