<p>ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿದ್ದ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಗತ್ ವೃತ್ತದಲ್ಲಿ ಮಂಗಳವಾರ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತಚಲಾಯಿಸಬೇಕು. ಮತದಾನದ ಜಾಗೃತಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮೇ 7ರಂದು ಯಾವುದೇ ಕೆಲಸ ಇದ್ದರೂ ಅದನ್ನು ಬದಿಗೆ ಇರಿಸಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ, ಸ್ವೀಪ್ ಸಮಿತಿಯ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಯಾವುದೇ ವ್ಯಕ್ತಿಯು ಮತದಾನದಿಂದ ವಂಚಿತರಾಗಬಾರದು. ಯಾವುದೇ ಭಯಪಡದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು. ಮತದಾನದ ಪ್ರಮಾಣ ಹೆಚ್ಚಳಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು’ ಎಂದು ಹೇಳಿದರು.</p>.<p>ಇದೇ ವೇಳೆ ಮತದಾನ ಜಾಗೃತಿಯ ಆಕಾಶ ಬುಟ್ಟಿ ಹಾರಿಸಲಾಯಿತು. ಸೆಲ್ಫಿ ಪಾಯಿಂಟ್, ಸಹಿ ಅಭಿಯಾನ ನಡೆಸಲಾಯಿತು.</p>.<p>ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್, ಉಪ ಆಯುಕ್ತ ಮಾಧವ ಗಿತ್ತೆ, ಎಇಇ ಶಿವನಗೌಡ ಪಾಟೀಲ, ಪರಿಸರ ಎಂಜಿನಿಯರ್ ಸುಷ್ಮಾ ಸಾಗರ, ಸಮುದಾಯದ ವ್ಯವಹಾರ ಅಧಿಕಾರಿ ವಿಜಯಲಕ್ಷ್ಮಿ ಪಟ್ಟೇದಾರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿದ್ದ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಗತ್ ವೃತ್ತದಲ್ಲಿ ಮಂಗಳವಾರ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತಚಲಾಯಿಸಬೇಕು. ಮತದಾನದ ಜಾಗೃತಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮೇ 7ರಂದು ಯಾವುದೇ ಕೆಲಸ ಇದ್ದರೂ ಅದನ್ನು ಬದಿಗೆ ಇರಿಸಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ, ಸ್ವೀಪ್ ಸಮಿತಿಯ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಯಾವುದೇ ವ್ಯಕ್ತಿಯು ಮತದಾನದಿಂದ ವಂಚಿತರಾಗಬಾರದು. ಯಾವುದೇ ಭಯಪಡದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು. ಮತದಾನದ ಪ್ರಮಾಣ ಹೆಚ್ಚಳಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು’ ಎಂದು ಹೇಳಿದರು.</p>.<p>ಇದೇ ವೇಳೆ ಮತದಾನ ಜಾಗೃತಿಯ ಆಕಾಶ ಬುಟ್ಟಿ ಹಾರಿಸಲಾಯಿತು. ಸೆಲ್ಫಿ ಪಾಯಿಂಟ್, ಸಹಿ ಅಭಿಯಾನ ನಡೆಸಲಾಯಿತು.</p>.<p>ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್, ಉಪ ಆಯುಕ್ತ ಮಾಧವ ಗಿತ್ತೆ, ಎಇಇ ಶಿವನಗೌಡ ಪಾಟೀಲ, ಪರಿಸರ ಎಂಜಿನಿಯರ್ ಸುಷ್ಮಾ ಸಾಗರ, ಸಮುದಾಯದ ವ್ಯವಹಾರ ಅಧಿಕಾರಿ ವಿಜಯಲಕ್ಷ್ಮಿ ಪಟ್ಟೇದಾರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>