<p><strong>ಕಲಬುರಗಿ</strong>: ದೇಶದ ಪ್ರತಿ ಪ್ರಜೆಯ ಮತ ಅಮೂಲ್ಯವಾದದ್ದು. ಮತಕ್ಕೆ ದೇಶದ ಭವಿಷ್ಯ ರೂಪಿಸುವ ಶಕ್ತಿಯಿದೆ. ಚುನಾವಣೆಯಲ್ಲಿ ವಿವೇಚನಾಯುತವಾಗಿ ಮತ ಚಲಾಯಿಸಬೇಕು ಎಂದು ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲ ಪ್ರವೀಣ ನಾಯಕ ಹೇಳಿದರು.</p>.<p>ಇಲ್ಲಿನ ಇಂದಿರಾ ನಗರದಲ್ಲಿರುವ ಸೇಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ‘ನನ್ನ ಮತ ಮಾರಾಟಕ್ಕಿಲ್ಲ–ಮತದಾರರ ಜಾಗೃತಿ ಆಂದೋಲನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ದೇಶದ ಭವಿಷ್ಯದಲ್ಲಿ ನಮ್ಮೆಲ್ಲರ ಭವಿಷ್ಯವಿದೆ ಎಂಬುದನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು. ಆಮಿಷಕ್ಕೆ ಬಲಿಯಾಗದೆ ಯೋಗ್ಯ ವ್ಯಕ್ತಿಗಳನ್ನು ಚುನಾಯಿಸಬೇಕು’ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿವೆ. ಯುವ ಜನಾಂಗಕ್ಕೆ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳನ್ನು ತಿಳಿಸುವುದು ಅಗತ್ಯವಾಗಿದೆ ಎಂದು ಹೇಳಿದರು.</p>.<p>ಸಾಹಿತಿ ಚಿ.ಸಿ. ನಿಂಗಣ್ಣ ಮಾತನಾಡಿ, ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆ ಸುಧಾರಿಸಲು ದೇಶದ ಪ್ರಜ್ಞಾವಂತರು ತೊಡಗಿಸಿಕೊಳ್ಳಬೇಕಾಗಿದೆ. ದೇಶದ ರಾಜಕಾರಣದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳವರು ಹೆಚ್ಚುತ್ತಿದ್ದು, ಮುಂದುವರಿದರೆ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ. ಕ್ರಿಮಿನಲ್ ಹಿನ್ನೆಲೆ ಇರುವವರನ್ನು ಚುನಾವಣೆಯಿಂದ ಹೊರಗಿಡಲು ಚುನಾವಣೆ ಆಯೋಗ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.</p>.<p>ಯುವ ಜನರು ದುಶ್ಚಟಗಳ ದಾಸರಾಗದೆ, ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಬೇಕು. ವಿದ್ಯಾರ್ಥಿಗಳು, ಪತ್ರಿಕೆಗಳನ್ನು ಓದುವುದರಿಂದ ಸಾಮಾನ್ಯ ಜ್ಞಾನ, ಸಾಮಾಜಿಕ ಪ್ರಜ್ಞೆ ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ತಿಳಿಯುತ್ತದೆ ಎಂದು ಹೇಳಿದರು.</p>.<p>ಉಪನ್ಯಾಸಕರಾದ ಅಶ್ವಿನಿ ಕುಲಕರ್ಣಿ ಹಾಗೂ ಪಲ್ಲವಿ ಜಿ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಆರ್. ದುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ವಿದ್ಯಾವತಿ ಕುಲಕರ್ಣಿ ಸ್ವಾಗತಿಸಿದರು. ಉಪನ್ಯಾಸಕ ಶಿವಶರಣಪ್ಪ ಪೂಜಾರಿ ನಿರೂಪಿಸಿದರು. ಉಪನ್ಯಾಸಕಿ ನಾಗಮ್ಮ ಹೊಸಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ದೇಶದ ಪ್ರತಿ ಪ್ರಜೆಯ ಮತ ಅಮೂಲ್ಯವಾದದ್ದು. ಮತಕ್ಕೆ ದೇಶದ ಭವಿಷ್ಯ ರೂಪಿಸುವ ಶಕ್ತಿಯಿದೆ. ಚುನಾವಣೆಯಲ್ಲಿ ವಿವೇಚನಾಯುತವಾಗಿ ಮತ ಚಲಾಯಿಸಬೇಕು ಎಂದು ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲ ಪ್ರವೀಣ ನಾಯಕ ಹೇಳಿದರು.</p>.<p>ಇಲ್ಲಿನ ಇಂದಿರಾ ನಗರದಲ್ಲಿರುವ ಸೇಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ‘ನನ್ನ ಮತ ಮಾರಾಟಕ್ಕಿಲ್ಲ–ಮತದಾರರ ಜಾಗೃತಿ ಆಂದೋಲನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ದೇಶದ ಭವಿಷ್ಯದಲ್ಲಿ ನಮ್ಮೆಲ್ಲರ ಭವಿಷ್ಯವಿದೆ ಎಂಬುದನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು. ಆಮಿಷಕ್ಕೆ ಬಲಿಯಾಗದೆ ಯೋಗ್ಯ ವ್ಯಕ್ತಿಗಳನ್ನು ಚುನಾಯಿಸಬೇಕು’ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿವೆ. ಯುವ ಜನಾಂಗಕ್ಕೆ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳನ್ನು ತಿಳಿಸುವುದು ಅಗತ್ಯವಾಗಿದೆ ಎಂದು ಹೇಳಿದರು.</p>.<p>ಸಾಹಿತಿ ಚಿ.ಸಿ. ನಿಂಗಣ್ಣ ಮಾತನಾಡಿ, ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆ ಸುಧಾರಿಸಲು ದೇಶದ ಪ್ರಜ್ಞಾವಂತರು ತೊಡಗಿಸಿಕೊಳ್ಳಬೇಕಾಗಿದೆ. ದೇಶದ ರಾಜಕಾರಣದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳವರು ಹೆಚ್ಚುತ್ತಿದ್ದು, ಮುಂದುವರಿದರೆ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ. ಕ್ರಿಮಿನಲ್ ಹಿನ್ನೆಲೆ ಇರುವವರನ್ನು ಚುನಾವಣೆಯಿಂದ ಹೊರಗಿಡಲು ಚುನಾವಣೆ ಆಯೋಗ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.</p>.<p>ಯುವ ಜನರು ದುಶ್ಚಟಗಳ ದಾಸರಾಗದೆ, ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಬೇಕು. ವಿದ್ಯಾರ್ಥಿಗಳು, ಪತ್ರಿಕೆಗಳನ್ನು ಓದುವುದರಿಂದ ಸಾಮಾನ್ಯ ಜ್ಞಾನ, ಸಾಮಾಜಿಕ ಪ್ರಜ್ಞೆ ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ತಿಳಿಯುತ್ತದೆ ಎಂದು ಹೇಳಿದರು.</p>.<p>ಉಪನ್ಯಾಸಕರಾದ ಅಶ್ವಿನಿ ಕುಲಕರ್ಣಿ ಹಾಗೂ ಪಲ್ಲವಿ ಜಿ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಆರ್. ದುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ವಿದ್ಯಾವತಿ ಕುಲಕರ್ಣಿ ಸ್ವಾಗತಿಸಿದರು. ಉಪನ್ಯಾಸಕ ಶಿವಶರಣಪ್ಪ ಪೂಜಾರಿ ನಿರೂಪಿಸಿದರು. ಉಪನ್ಯಾಸಕಿ ನಾಗಮ್ಮ ಹೊಸಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>