ವೃದ್ಧರನ್ನು ಕರೆತಂದು ಮತದಾನ ಮಾಡಿಸುವ ಸಂಬಂಧ ಹದನೂರ ಗ್ರಾಮದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಜಗಳ ಪೊಲೀಸರ ಮಧ್ಯಸ್ಥಿಕೆಯಿಂದ ತಿಳಿಗೊಂಡಿತು. ಬಳಿಕ ಸಂಸದ, ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ, ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ, ಜಿ.ಪಂ ಮಾಜಿ ಸದಸ್ಯ ಅರವಿಂದ ಚವಾಣ್ ಸ್ಥಳಕ್ಕೆ ಭೇಟಿ ನೀಡಿ ಎಲ್ಲರನ್ನು ಸಮಾಧಾನ ಪಡಿಸಿದರು.