ಈ ತಂತ್ರಜ್ಞಾನವನ್ನು ಜನರಿಗೆ ತಲುಪಿಸುವುದರಿಂದ ಹಣ ಮತ್ತು ಸಮಯದ ಸದುಪಯೋಗವಾಗುವುದಲ್ಲದೇ ಎಲ್ಲ ತರಹದ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್.ಹೆಬ್ಬಾಳ ಮಾತನಾಡಿ, ‘ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ಸಹಯೋಗದಲ್ಲಿ ಶೀಘ್ರವೇ ಅಂತರರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಲಾಗುವುದು’ ಎಂದು ಹೇಳಿದರು.