ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಸರಾಯರ ಬೃಂದಾವನ ಧ್ವಂಸ: ತನಿಖೆಗೆ ಉತ್ತರಾದಿಮಠದ ಸತ್ಯಾತ್ಮತೀರ್ಥರ ಆಗ್ರಹ

Last Updated 18 ಜುಲೈ 2019, 6:33 IST
ಅಕ್ಷರ ಗಾತ್ರ

ಕಲಬುರ್ಗಿ: ಕೊಪ್ಪಳ ಜಿಲ್ಲೆ ಆನೆಗೊಂದಿಯಲ್ಲಿ ತುಂಗಾಭದ್ರಾ ನದಿ ತಟದಲ್ಲಿರುವವ್ಯಾಸರಾಜರ ವೃಂದಾವನವನ್ನು ಧ್ವಂಸಗೊಳಿಸಿರುವ ದುಷ್ಕರ್ಮಿಗಳ ಕೃತ್ಯಕ್ಕೆಉತ್ತರಾದಿಮಠದ ಸತ್ಯಾತ್ಮತೀರ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ವಿದ್ಯಾನಗರದ ಕೃಷ್ಣಮಂದಿರದಲ್ಲಿ ಮಹಾಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದರು.

ಬೃಂದಾವನದ ಪುನರ್ ನಿರ್ಮಾಣಕ್ಕೆ ವ್ಯಾಸರಾಜಮಠದ ಸ್ವಾಮಿಗಳು ಮುಂದಾಗಿದ್ದಾರೆ. ಅದಕ್ಕೆ ಉತ್ತರಾದಿಮಠ ಅಗತ್ಯ ನೆರವು ನೀಡಲಿದೆ ಎಂದರು. ಧಾರ್ಮಿಕ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಆನೆಗೊಂದಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT