<p><strong>ವಾಡಿ:</strong> ಚಿತ್ತಾಪುರ ತಾಲ್ಲೂಕಿನ ನಾಲವಾರದ ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ಭವ್ಯ ರಥೋತ್ಸವ ಸೋಮವಾರ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮ, ಸಡಗರದಿಂದ ಜರುಗಿತು.</p>.<p>ರಥೋತ್ಸವ ಹಿನ್ನೆಲೆ ಬೆಳಗ್ಗೆಯಿಂದ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕೋರಿಸಿದ್ಧೇಶ್ವರರ ಗದ್ದುಗೆಗೆ ವಿಶೇಷ ಪೂಜೆ, ಮಹಾ ಮಂಗಳಾರತಿ, ಕ್ಷೀರಾಭಿಷೇಕ, ಗಂಧಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು.</p>.<p>ರಾಜ್ಯ, ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಬಂದ ಕೋರಿಸಿದ್ದೇಶ್ವರ ದೇವರ ಹಾಗೂ ಸಿದ್ಧತೋಟೇಂದ್ರ ಶಿವಾಚಾರ್ಯರ ದರ್ಶನ ಪಡೆದರು.</p>.<p>ಮಠದ ಆವರಣದಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿತ್ತು. ರಥಕ್ಕೆ ರಾತ್ರಿ ಸಾಂಪ್ರದಾಯಿಕ ಪದ್ಧತಿಯಂತೆ ಸಿದ್ಧತೋಟೇಂದ್ರ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ರಥ ಚಲಿಸುತ್ತಿದ್ದಂತೆ ಕೋರಿಸಿದ್ದೇಶ್ವರ ಮಹಾರಾಜಕೀ ಜೈ... ಎಂಬ ಘೋಷಣೆ ಮೊಳಗಿಸುತ್ತ, ಭಕ್ತರು ಬಾಳೆಹಣ್ಣು, ಹೂವುಗಳನ್ನು ರಥದತ್ತ ಎಸೆದು ಭಕ್ತಿ ಸಮರ್ಪಿಸಿದರು.</p>.<p>ರಥೋತ್ಸವಕ್ಕೂ ಮುನ್ನ ಮದ್ದುಗಳು ಸುಡುವ ಕಾರ್ಯಕ್ರಮ ನೆರವೇರಿತು. ಬಾನಂಗಳದಲ್ಲಿ ಸಿಡಿಮದ್ದುಗಳು ಮೂಡಿಸಿದ ಬಣ್ಣ ಬಣ್ಣದ ಚಿತ್ತಾರ ಗಮನಸೆಳೆಯಿತು.</p>.<p>ಶಹಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ವಾಡಿ ಪಿಎಸ್ಐ ತಿರುಮಲೇಶ.ಕೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ಮಠದ ಆವರಣದಲ್ಲಿ ನಂದಿಕೋಲು ಕುಣಿತ, ಡೊಳ್ಳಿನ ಕುಣಿತಗಳು ಜರುಗಿದವು. ಕಲಾ ತಂಡಗಳು ರಥೋತ್ಸವಕ್ಕೆ ಮೆರಗು ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಚಿತ್ತಾಪುರ ತಾಲ್ಲೂಕಿನ ನಾಲವಾರದ ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ಭವ್ಯ ರಥೋತ್ಸವ ಸೋಮವಾರ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮ, ಸಡಗರದಿಂದ ಜರುಗಿತು.</p>.<p>ರಥೋತ್ಸವ ಹಿನ್ನೆಲೆ ಬೆಳಗ್ಗೆಯಿಂದ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕೋರಿಸಿದ್ಧೇಶ್ವರರ ಗದ್ದುಗೆಗೆ ವಿಶೇಷ ಪೂಜೆ, ಮಹಾ ಮಂಗಳಾರತಿ, ಕ್ಷೀರಾಭಿಷೇಕ, ಗಂಧಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು.</p>.<p>ರಾಜ್ಯ, ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಬಂದ ಕೋರಿಸಿದ್ದೇಶ್ವರ ದೇವರ ಹಾಗೂ ಸಿದ್ಧತೋಟೇಂದ್ರ ಶಿವಾಚಾರ್ಯರ ದರ್ಶನ ಪಡೆದರು.</p>.<p>ಮಠದ ಆವರಣದಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿತ್ತು. ರಥಕ್ಕೆ ರಾತ್ರಿ ಸಾಂಪ್ರದಾಯಿಕ ಪದ್ಧತಿಯಂತೆ ಸಿದ್ಧತೋಟೇಂದ್ರ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ರಥ ಚಲಿಸುತ್ತಿದ್ದಂತೆ ಕೋರಿಸಿದ್ದೇಶ್ವರ ಮಹಾರಾಜಕೀ ಜೈ... ಎಂಬ ಘೋಷಣೆ ಮೊಳಗಿಸುತ್ತ, ಭಕ್ತರು ಬಾಳೆಹಣ್ಣು, ಹೂವುಗಳನ್ನು ರಥದತ್ತ ಎಸೆದು ಭಕ್ತಿ ಸಮರ್ಪಿಸಿದರು.</p>.<p>ರಥೋತ್ಸವಕ್ಕೂ ಮುನ್ನ ಮದ್ದುಗಳು ಸುಡುವ ಕಾರ್ಯಕ್ರಮ ನೆರವೇರಿತು. ಬಾನಂಗಳದಲ್ಲಿ ಸಿಡಿಮದ್ದುಗಳು ಮೂಡಿಸಿದ ಬಣ್ಣ ಬಣ್ಣದ ಚಿತ್ತಾರ ಗಮನಸೆಳೆಯಿತು.</p>.<p>ಶಹಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ವಾಡಿ ಪಿಎಸ್ಐ ತಿರುಮಲೇಶ.ಕೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ಮಠದ ಆವರಣದಲ್ಲಿ ನಂದಿಕೋಲು ಕುಣಿತ, ಡೊಳ್ಳಿನ ಕುಣಿತಗಳು ಜರುಗಿದವು. ಕಲಾ ತಂಡಗಳು ರಥೋತ್ಸವಕ್ಕೆ ಮೆರಗು ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>