<p>ವಾಡಿ: ಪಾರ್ಶ್ವವಾಯುನಿಂದ ಬಳಲುತ್ತಿದ್ದ ಸಂಬಂಧಿಯನ್ನು ಆಸ್ಪತ್ರೆಗೆ ಸೇರಿಸಿ ಮಧ್ಯರಾತ್ರಿ ಊರಿಗೆ ವಾಪಸ್ಸಾಗುತ್ತಿರುವ ಹೊತ್ತಿನಲ್ಲೇ ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಭೀಕರ ಅಫಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.</p>.<p>ಲಾಡ್ಲಾಪುರ ಹಲಕರ್ಟಿ ಮಧ್ಯೆ ರಾಷ್ಟ್ರೀಯ ಹೆದ್ದಾರಿ–150ರಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 5 ಜನ ಸಂಬಂಧಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಧಾರುಣ ಸಾವಿಗೆ ಇಂಗಳಗಿ ಗ್ರಾಮಸ್ಥರು ಮರುಗಿದ್ದಾರೆ.</p>.<p>ಮಹೆಬೂಬ್ ಅಲಿ(42), ತೊಲಾ ಪಾಷಾ(30), ಹುಸೇನ್ ಶಾಹಾಪುರ(47), ರಸೂಲಬಿ(43) ಹಾಗೂ ಫಾತೀಮಾ(40) ಮೃತಪಟ್ಟವರು. ಅಪಘಾತದಲ್ಲಿ ವಾಡಿ ಸಮೀಪದ ಇಂಗಳಗಿ ನಿವಾಸಿಗಳು ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.</p>.<p>ಪಾರ್ಶ್ವವಾಯು ಪೀಡಿತ ಸಂಬಂಧಿ ಮಹ್ಮದ್ ಅಬ್ದುಲ್ ಸಾಬ್ನನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಲು 9 ಮಂದಿ ತೆರಳಿದ್ದರು. ಅದರಲ್ಲಿ ಐವರು ಇಂಗಳಗಿಗೆ ಮರಳುತ್ತಿದ್ದರು. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಚಾಲಕ ತೊಲಾ ಪಾಷಾ ತನ್ನ 5 ತಿಂಗಳು ಗರ್ಭಿಣಿ ಮಡದಿ ರೇಷ್ಮಾ ಬೇಗಂಗೆ ಕರೆ ಮಾಡಿ ಒಂದು ತಾಸಿನಲ್ಲಿ ಮನೆಗೆ ಬರುತ್ತೇನೆ ಎಂದು ತಿಳಿಸಿದ್ದ. ಆದರೆ, ಸೇರಿದ್ದು ಮಾತ್ರ ಮಸಣಕ್ಕೆ.</p>.<p>ಘಟನಾ ಸ್ಥಳಕ್ಕೆ ಡಿಐಜಿ ಶಾಂತನು ಸಿನ್ಹಾ, ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸಾಮೂಹಿಕ ಅಂತ್ಯಸಂಸ್ಕಾರ: ಶನಿವಾರ ಮಧ್ಯಾಹ್ನ ಶವಗಳ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವಗಳನ್ನು ಹಸ್ತಾಂತರಿಸಲಾಯಿತು. ಸಂಜೆ ಇಂಗಳಗಿ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಸಂಸ್ಕಾರದಲ್ಲಿ ಇಡೀ ಗ್ರಾಮಸ್ಥರು ಭಾಗವಹಿಸಿದ್ದರು. ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-34-200954283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಾಡಿ: ಪಾರ್ಶ್ವವಾಯುನಿಂದ ಬಳಲುತ್ತಿದ್ದ ಸಂಬಂಧಿಯನ್ನು ಆಸ್ಪತ್ರೆಗೆ ಸೇರಿಸಿ ಮಧ್ಯರಾತ್ರಿ ಊರಿಗೆ ವಾಪಸ್ಸಾಗುತ್ತಿರುವ ಹೊತ್ತಿನಲ್ಲೇ ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಭೀಕರ ಅಫಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.</p>.<p>ಲಾಡ್ಲಾಪುರ ಹಲಕರ್ಟಿ ಮಧ್ಯೆ ರಾಷ್ಟ್ರೀಯ ಹೆದ್ದಾರಿ–150ರಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 5 ಜನ ಸಂಬಂಧಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಧಾರುಣ ಸಾವಿಗೆ ಇಂಗಳಗಿ ಗ್ರಾಮಸ್ಥರು ಮರುಗಿದ್ದಾರೆ.</p>.<p>ಮಹೆಬೂಬ್ ಅಲಿ(42), ತೊಲಾ ಪಾಷಾ(30), ಹುಸೇನ್ ಶಾಹಾಪುರ(47), ರಸೂಲಬಿ(43) ಹಾಗೂ ಫಾತೀಮಾ(40) ಮೃತಪಟ್ಟವರು. ಅಪಘಾತದಲ್ಲಿ ವಾಡಿ ಸಮೀಪದ ಇಂಗಳಗಿ ನಿವಾಸಿಗಳು ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.</p>.<p>ಪಾರ್ಶ್ವವಾಯು ಪೀಡಿತ ಸಂಬಂಧಿ ಮಹ್ಮದ್ ಅಬ್ದುಲ್ ಸಾಬ್ನನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಲು 9 ಮಂದಿ ತೆರಳಿದ್ದರು. ಅದರಲ್ಲಿ ಐವರು ಇಂಗಳಗಿಗೆ ಮರಳುತ್ತಿದ್ದರು. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಚಾಲಕ ತೊಲಾ ಪಾಷಾ ತನ್ನ 5 ತಿಂಗಳು ಗರ್ಭಿಣಿ ಮಡದಿ ರೇಷ್ಮಾ ಬೇಗಂಗೆ ಕರೆ ಮಾಡಿ ಒಂದು ತಾಸಿನಲ್ಲಿ ಮನೆಗೆ ಬರುತ್ತೇನೆ ಎಂದು ತಿಳಿಸಿದ್ದ. ಆದರೆ, ಸೇರಿದ್ದು ಮಾತ್ರ ಮಸಣಕ್ಕೆ.</p>.<p>ಘಟನಾ ಸ್ಥಳಕ್ಕೆ ಡಿಐಜಿ ಶಾಂತನು ಸಿನ್ಹಾ, ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸಾಮೂಹಿಕ ಅಂತ್ಯಸಂಸ್ಕಾರ: ಶನಿವಾರ ಮಧ್ಯಾಹ್ನ ಶವಗಳ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವಗಳನ್ನು ಹಸ್ತಾಂತರಿಸಲಾಯಿತು. ಸಂಜೆ ಇಂಗಳಗಿ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಸಂಸ್ಕಾರದಲ್ಲಿ ಇಡೀ ಗ್ರಾಮಸ್ಥರು ಭಾಗವಹಿಸಿದ್ದರು. ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-34-200954283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>