<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ):</strong> ಎಡಬಿಡದೆ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಬೆನಕನಳ್ಳಿ ಗ್ರಾಮದಲ್ಲಿ ಭಾನುವಾರ 20ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ.</p><p>ತಾಲ್ಲೂಕಿನ ಕಲ್ಲೂರು ರೋಡ ಗ್ರಾಮದಲ್ಲಿ 10ಕ್ಕೂ ಮನೆಗಳಿಗೆ ನೀರು ನುಗ್ಗಿದೆ. ಮಳೆಯ ಪ್ರವಾಹದ ನೀರಿನಿಂದ ತಡೆಗೋಡೆ ಬಿದ್ದಿದೆ ಎಂದು ತಾ.ಪಂ. ಮಾಜಿ ಸದಸ್ಯ ಜಗನ್ನಾಥ ಈದಲಾಯಿ ತಿಳಿಸಿದ್ದಾರೆ.</p><p>ಬೆನಕನಳ್ಳಿ ಗ್ರಾಮದಲ್ಲಿ ನೀರು ಹರಿದು ಹೋಗುವ ಸ್ಥಳಕ್ಕೆ ಅಡ್ಡಲಾಗಿ ಬಸ್ ನಿಲ್ದಾಣ ನಿರ್ಮಿಸುತ್ತಿರುವುದರಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದೆ ವಸತಿ ಪ್ರದೇಶದತ್ತ ನುಗ್ಗುತ್ತಿದೆ ಎಂದು ಬಿಜೆಪಿ ಯುವ ಮುಖಂಡ ಮಲ್ಲು ರಾಯಪ್ಪಗೌಡ ತಿಳಿಸಿದ್ದಾರೆ. </p><p>ನಾಗರಾಳ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಗಾರಂಪಳ್ಳಿ, ತಾಜಲಾಪುರ ಸೇತುವೆ ಮುಳುಗಿವೆ. ರಾಜ್ಯ ಹೆದ್ದಾರಿ 75ಕ್ಕೆ ಸಂಪರ್ಕ ಬೆಸೆಯುವ ಎರಡು ಗ್ರಾಮಗಳು ಮುಖ್ಯ ರಸ್ತೆಗೆ ಹೋಗುವ ಸಂಚಾರ ಬಂದ್ ಆಗಿದೆ. ಗಾರಂಪಳ್ಳಿಯಲ್ಲಿ ಹೊಸ ಊರು ಹಳೆ ಊರಿನ ಮಧ್ಯೆ ಸಂಪರ್ಕ ಕಡಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ):</strong> ಎಡಬಿಡದೆ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಬೆನಕನಳ್ಳಿ ಗ್ರಾಮದಲ್ಲಿ ಭಾನುವಾರ 20ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ.</p><p>ತಾಲ್ಲೂಕಿನ ಕಲ್ಲೂರು ರೋಡ ಗ್ರಾಮದಲ್ಲಿ 10ಕ್ಕೂ ಮನೆಗಳಿಗೆ ನೀರು ನುಗ್ಗಿದೆ. ಮಳೆಯ ಪ್ರವಾಹದ ನೀರಿನಿಂದ ತಡೆಗೋಡೆ ಬಿದ್ದಿದೆ ಎಂದು ತಾ.ಪಂ. ಮಾಜಿ ಸದಸ್ಯ ಜಗನ್ನಾಥ ಈದಲಾಯಿ ತಿಳಿಸಿದ್ದಾರೆ.</p><p>ಬೆನಕನಳ್ಳಿ ಗ್ರಾಮದಲ್ಲಿ ನೀರು ಹರಿದು ಹೋಗುವ ಸ್ಥಳಕ್ಕೆ ಅಡ್ಡಲಾಗಿ ಬಸ್ ನಿಲ್ದಾಣ ನಿರ್ಮಿಸುತ್ತಿರುವುದರಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದೆ ವಸತಿ ಪ್ರದೇಶದತ್ತ ನುಗ್ಗುತ್ತಿದೆ ಎಂದು ಬಿಜೆಪಿ ಯುವ ಮುಖಂಡ ಮಲ್ಲು ರಾಯಪ್ಪಗೌಡ ತಿಳಿಸಿದ್ದಾರೆ. </p><p>ನಾಗರಾಳ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಗಾರಂಪಳ್ಳಿ, ತಾಜಲಾಪುರ ಸೇತುವೆ ಮುಳುಗಿವೆ. ರಾಜ್ಯ ಹೆದ್ದಾರಿ 75ಕ್ಕೆ ಸಂಪರ್ಕ ಬೆಸೆಯುವ ಎರಡು ಗ್ರಾಮಗಳು ಮುಖ್ಯ ರಸ್ತೆಗೆ ಹೋಗುವ ಸಂಚಾರ ಬಂದ್ ಆಗಿದೆ. ಗಾರಂಪಳ್ಳಿಯಲ್ಲಿ ಹೊಸ ಊರು ಹಳೆ ಊರಿನ ಮಧ್ಯೆ ಸಂಪರ್ಕ ಕಡಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>