ಜನರು ಹಗಲು–ರಾತ್ರಿ ಎನ್ನದೆ ಗ್ರಾಮದ ಸುತ್ತಲಿನ ಹೊಲಗದ್ದೆಗಳಿಗೆ ಹೋಗಿ ಕೊಡಗಳಲ್ಲಿ ನೀರು ಹೊತ್ತುಕೊಂಡು ಬರುತ್ತಿದ್ದಾರೆ. ಸೈಕಲ್, ಬೈಕ್, ಜೀಪ್ ಮತ್ತಿತರ ವಾಹನಗಳಲ್ಲಿ ನೀರು ತರುತ್ತಿದ್ದಾರೆ. ಕೆಲ ಶ್ರೀಮಂತರು ಟ್ಯಾಂಕರ್ ನೀರಿಗೆ ಮೊರೆ ಹೋಗಿದ್ದಾರೆ. ಬಿಸಿಲಿನಿಂದಾಗಿ ಹೊಲಗದ್ದೆಗಳಿಗೆ ಹೋಗಿ ನೀರು ತರುವುದು ಕಷ್ಟಕರವಾಗುತ್ತಿದೆ ಎಂದು ಕಾಂತಪ್ಪ ಸವಳೆ ತಿಳಿಸಿದರು.