ಕಲಬುರ್ಗಿ: ಶುಕ್ರವಾರ ಬೆಳಿಗ್ಗೆ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ 5.85 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ.
ಇದರಿಂದಾಗಿ ಜಿಲ್ಲೆಯ 148 ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.ಸಂಜೆ ವೇಳೆಗೆ 7.50 ಲಕ್ಷ ಕ್ಯುಸೆಕ್ ನೀರು ಹೊರಬಿಡುವ ಸಾಧ್ಯತೆ ಇದೆ.
ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆಗಾಗಿ ಎರಡು ಹೆಲಿಕಾಪ್ಟರ್ ಗಳು ಬೀದರ್ ವಾಯುನೆಲೆಗೆ ಬಂದಿಳಿಯಲಿವೆ. ಹೆಚ್ಚುವರಿ ಎಸ್ ಡಿ ಆರ್ಎಫ್ ತಂಡಗಳನ್ನು ಕರೆಸಿಕೊಳ್ಳಲಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಬೋಟ್ ಹಾಗೂ ನುರಿತ ಈಜುಗಾರರನ್ನು ಕರೆಸಿಕೊಳ್ಳಲಾಗುತ್ತಿದೆ.
ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಇಡೀ ರಾತ್ರಿ ಅಧಿಕಾರಿಗಳ ಸಭೆ ನಡೆಸಿದ್ದು, ಎಲ್ಲ 148 ಗ್ರಾಮಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ.
ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ
ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ