‘ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿದ ಮಾತ್ರಕ್ಕೆ ಜನಪ್ರತಿನಿಧಿಗಳ ಜವಾಬ್ದಾರಿ ಮುಗಿಯುವುದಿಲ್ಲ. ಅದು ಯಾವ ಪರಿಸ್ಥಿತಿಯಲ್ಲಿ ಇದೆ ಎಂಬುದನ್ನು ನೋಡಿಕೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಕಲಬುರ್ಗಿಯಲ್ಲಿ ಕುಳಿತು ಆಡಳಿತ ನಡೆಸಿದರೆ ಜನರ ಸಮಸ್ಯೆ ಬಗೆಹರಿಯುವುದಿಲ್ಲ’ ಎಂದು ಗ್ರಾಮದ ಮುಖಂಡರಾದ ಸಿದ್ದರಾಮ ಕುಂಬಾರ, ಶಿವಶರಣಪ್ಪ ಜಾಗೀರದಾರ, ಇಂತಿಹಾಸ ಜಾಗೀರದಾರ, ನಾಗೇಂದ್ರ ಜಗದಿ ಅಸಮಾಧಾನ ವ್ಯಕ್ತಪಡಿಸಿದರು.