<p><strong>ಚಿಂಚೋಳಿ:</strong> ತಾಲ್ಲೂಕಿನ ಚಂದನಕೇರಾ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಭಾನುವಾರ ಮಧ್ಯಾಹ್ನ ನೀರು ಸರಬರಾಜು ಪುನರ್ ಆರಂಭವಾಗಿದೆ.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಪ್ರಭುಲಿಂಗ ವಾಲಿ, ವಾರ್ಡನ್ ಗಣಪತಿ ಜಾಧವ ವಸತಿ ನಿಲಯಕ್ಕೆ ಭೇಟಿ ನೀಡಿ ಚಂದನಕೇರಾದಲ್ಲಿಯೇ ಮುಕ್ಕಾಂ ಹೂಡಿ ನೀರು ಸರಬರಾಜು ಮಾಡಿಸಿದರು.</p>.<p>ವಸತಿ ನಿಲಯದ ಅವ್ಯವಸ್ಥೆ ಕುರಿತು ಪ್ರಜಾವಾಣಿಯ ಭಾನುವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ವಸತಿ ನಿಲಯಕ್ಕೆ ದೌಡಾಯಿಸಿ ವಸತಿ ನಿಲಯದ ಸ್ಥಿತಿಗತಿ ಮತ್ತು ಮಕ್ಕಳ ಸಮಸ್ಯೆ ಕುರಿತು ವಾರ್ಡನ್ ಅವರಿಂದ ಮಾಹಿತಿ ಪಡೆದರು. </p>.<p>ವಸತಿ ನಿಲಯದಲ್ಲಿ 4 ದಿನಗಳಿಂದ ಕುಡಿವ ನೀರು ಪೂರೈಕೆಯಾಗಿರಲಿಲ್ಲ. ಇದರಿಂದ ಮಕ್ಕಳು ಸಮೀಪದ ಮಲ್ಕಪ್ಪ ಸಾಧು ಮುತ್ಯಾನ ಮಠಕ್ಕೆ ತೆರಳಿ ನೀರು ಕುಡಿಯುತ್ತಿದ್ದರು.</p>.<p>‘ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ವಸತಿ ನಿಲಯಕ್ಕೆ ನಲ್ಲಿ ಸಂಪರ್ಕ ಕೈಗೊಳ್ಳಲಾಗಿದ್ದು ಇದರಿಂದಲೇ ಭಾನುವಾರ ಮಧ್ಯಾಹ್ನ 2.40ರಿಂದ ನೀರು ಸರಬರಾಜು ಪುನರ್ ಆರಂಭವಾಗಿದೆ. ಮಧ್ಯಾಹ್ನ ನಂತರ ಸ್ನಾನ ಮಾಡಿದ್ದೇವೆ’ ಎಂದು ವಿದ್ಯಾರ್ಥಿ ವಿದ್ಯಾಸಾಗರ ರಾಠೋಡ್ ಪ್ರಜಾವಾಣಿಗೆ ತಿಳಿಸಿದರು.</p>.<p>ವಸತಿ ನಿಲಯದಲ್ಲಿ ಕೊಳವೆಬಾವಿಯೇ ಇಲ್ಲದ ಕಾರಣ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಕಾರ್ಯಕ್ರಮದಡಿಯಲ್ಲಿ ನಲ್ಲಿ ಸಂಪರ್ಕ ಪಡೆದುಕೊಳ್ಳಲಾಗಿದೆ. ಮೋಟಾರ್ ಸುಟ್ಟಿದ್ದರಿಂದ ಗ್ರಾಮದಲ್ಲಿ 4 ದಿನಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿತ್ತು.</p>.<p>ಮೋಟಾರ್ ದುರಸ್ತಿಗೊಳಿಸಿದ್ದರಿಂದ ಭಾನುವಾರ ಮಧ್ಯಾಹ್ನದಿಂದ ನೀರು ಪೂರೈಕೆ ಪ್ರಾರಂಭವಾಗಿದೆ ಎಂದು ಪ್ರಭುಲಿಂಗ ವಾಲಿ ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ತಾಲ್ಲೂಕಿನ ಚಂದನಕೇರಾ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಭಾನುವಾರ ಮಧ್ಯಾಹ್ನ ನೀರು ಸರಬರಾಜು ಪುನರ್ ಆರಂಭವಾಗಿದೆ.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಪ್ರಭುಲಿಂಗ ವಾಲಿ, ವಾರ್ಡನ್ ಗಣಪತಿ ಜಾಧವ ವಸತಿ ನಿಲಯಕ್ಕೆ ಭೇಟಿ ನೀಡಿ ಚಂದನಕೇರಾದಲ್ಲಿಯೇ ಮುಕ್ಕಾಂ ಹೂಡಿ ನೀರು ಸರಬರಾಜು ಮಾಡಿಸಿದರು.</p>.<p>ವಸತಿ ನಿಲಯದ ಅವ್ಯವಸ್ಥೆ ಕುರಿತು ಪ್ರಜಾವಾಣಿಯ ಭಾನುವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ವಸತಿ ನಿಲಯಕ್ಕೆ ದೌಡಾಯಿಸಿ ವಸತಿ ನಿಲಯದ ಸ್ಥಿತಿಗತಿ ಮತ್ತು ಮಕ್ಕಳ ಸಮಸ್ಯೆ ಕುರಿತು ವಾರ್ಡನ್ ಅವರಿಂದ ಮಾಹಿತಿ ಪಡೆದರು. </p>.<p>ವಸತಿ ನಿಲಯದಲ್ಲಿ 4 ದಿನಗಳಿಂದ ಕುಡಿವ ನೀರು ಪೂರೈಕೆಯಾಗಿರಲಿಲ್ಲ. ಇದರಿಂದ ಮಕ್ಕಳು ಸಮೀಪದ ಮಲ್ಕಪ್ಪ ಸಾಧು ಮುತ್ಯಾನ ಮಠಕ್ಕೆ ತೆರಳಿ ನೀರು ಕುಡಿಯುತ್ತಿದ್ದರು.</p>.<p>‘ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ವಸತಿ ನಿಲಯಕ್ಕೆ ನಲ್ಲಿ ಸಂಪರ್ಕ ಕೈಗೊಳ್ಳಲಾಗಿದ್ದು ಇದರಿಂದಲೇ ಭಾನುವಾರ ಮಧ್ಯಾಹ್ನ 2.40ರಿಂದ ನೀರು ಸರಬರಾಜು ಪುನರ್ ಆರಂಭವಾಗಿದೆ. ಮಧ್ಯಾಹ್ನ ನಂತರ ಸ್ನಾನ ಮಾಡಿದ್ದೇವೆ’ ಎಂದು ವಿದ್ಯಾರ್ಥಿ ವಿದ್ಯಾಸಾಗರ ರಾಠೋಡ್ ಪ್ರಜಾವಾಣಿಗೆ ತಿಳಿಸಿದರು.</p>.<p>ವಸತಿ ನಿಲಯದಲ್ಲಿ ಕೊಳವೆಬಾವಿಯೇ ಇಲ್ಲದ ಕಾರಣ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಕಾರ್ಯಕ್ರಮದಡಿಯಲ್ಲಿ ನಲ್ಲಿ ಸಂಪರ್ಕ ಪಡೆದುಕೊಳ್ಳಲಾಗಿದೆ. ಮೋಟಾರ್ ಸುಟ್ಟಿದ್ದರಿಂದ ಗ್ರಾಮದಲ್ಲಿ 4 ದಿನಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿತ್ತು.</p>.<p>ಮೋಟಾರ್ ದುರಸ್ತಿಗೊಳಿಸಿದ್ದರಿಂದ ಭಾನುವಾರ ಮಧ್ಯಾಹ್ನದಿಂದ ನೀರು ಪೂರೈಕೆ ಪ್ರಾರಂಭವಾಗಿದೆ ಎಂದು ಪ್ರಭುಲಿಂಗ ವಾಲಿ ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>