<p><strong>ಚಿಂಚೋಳಿ</strong>: ‘ಕಾಶ್ಮೀರದ ಪಹಲ್ಗಾಮ್ನಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯನ್ನು ಖಂಡಿಸಿದ ನಿಡಗುಂದಾದ ಕಂಚಾಳಕುಂಟಿ ನಂದೀಶ್ವರ ಮಠದ ಕರುಣೇಶ್ವರ ಶಿವಾಚಾರ್ಯರು, ಈ ಘಟನೆಯಿಂದ ಭಾರತೀಯರು ಪಾಠ ಕಲಿಯಬೇಕು’ ಎಂದು ಹೇಳಿದರು.</p>.<p>‘ಇದು ಕೇವಲ 26 ಜೀವಗಳು ಮತ್ತು 26 ಕುಟುಂಬಗಳ ಪ್ರಶ್ನೆಯಲ್ಲ. ಇದು ಅಖಂಡ ಭಾರತದ ಮೇಲಿನ ದಾಳಿಯಾಗಿದೆ. ಇದನ್ನು ಇಡೀ ದೇಶ ಮೆಟ್ಟಿ ನಿಲ್ಲಬೇಕು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಯಾ ರಾಜ್ಯಗಳು ಸಲಹೆಗಳನ್ನು ನೀಡಲಿ, ಬದಲಾಗಿ ವ್ಯತಿರಿಕ್ತ ಅಭಿಪ್ರಾಯ ನೀಡಬಾರದು’ ಎಂದರು.</p>.<p>‘ಭಾರತದ ಅಖಂಡತೆಗೆ ಮಾರಕವಾಗಿರುವ ಇಂತಹ ದಾಳಿಗಳನ್ನು ಎದುರಿಸಲು ದೇಶ ಸದಾ ಸನ್ನದ್ಧವಾಗಿರಬೇಕು. ದೇಶದ ವಿಚಾರ ಬಂದಾಗ ಎಲ್ಲರೂ ಒಂದಾಗಿ ದೇಶವಿರೋಧಿ ಶಕ್ತಿಗಳ ವಿರುದ್ಧ ಒಂದಾಗಬೇಕು’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ‘ಕಾಶ್ಮೀರದ ಪಹಲ್ಗಾಮ್ನಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯನ್ನು ಖಂಡಿಸಿದ ನಿಡಗುಂದಾದ ಕಂಚಾಳಕುಂಟಿ ನಂದೀಶ್ವರ ಮಠದ ಕರುಣೇಶ್ವರ ಶಿವಾಚಾರ್ಯರು, ಈ ಘಟನೆಯಿಂದ ಭಾರತೀಯರು ಪಾಠ ಕಲಿಯಬೇಕು’ ಎಂದು ಹೇಳಿದರು.</p>.<p>‘ಇದು ಕೇವಲ 26 ಜೀವಗಳು ಮತ್ತು 26 ಕುಟುಂಬಗಳ ಪ್ರಶ್ನೆಯಲ್ಲ. ಇದು ಅಖಂಡ ಭಾರತದ ಮೇಲಿನ ದಾಳಿಯಾಗಿದೆ. ಇದನ್ನು ಇಡೀ ದೇಶ ಮೆಟ್ಟಿ ನಿಲ್ಲಬೇಕು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಯಾ ರಾಜ್ಯಗಳು ಸಲಹೆಗಳನ್ನು ನೀಡಲಿ, ಬದಲಾಗಿ ವ್ಯತಿರಿಕ್ತ ಅಭಿಪ್ರಾಯ ನೀಡಬಾರದು’ ಎಂದರು.</p>.<p>‘ಭಾರತದ ಅಖಂಡತೆಗೆ ಮಾರಕವಾಗಿರುವ ಇಂತಹ ದಾಳಿಗಳನ್ನು ಎದುರಿಸಲು ದೇಶ ಸದಾ ಸನ್ನದ್ಧವಾಗಿರಬೇಕು. ದೇಶದ ವಿಚಾರ ಬಂದಾಗ ಎಲ್ಲರೂ ಒಂದಾಗಿ ದೇಶವಿರೋಧಿ ಶಕ್ತಿಗಳ ವಿರುದ್ಧ ಒಂದಾಗಬೇಕು’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>