ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಕೆಲಸಕ್ಕೆ ಗುಳೆ ಹೋಗಲು ಪತಿ ನಕಾರ: ಪತ್ನಿ ಆತ್ಮಹತ್ಯೆ

Last Updated 20 ಜನವರಿ 2022, 8:51 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ ಜಿಲ್ಲೆ): ಗುಳೆ ಹೋಗಲು ಪತಿ ನಿರಾಕರಿಸಿದ್ದಕ್ಕೆ ತಾಲ್ಲೂಕಿನ ರುದ್ನೂರ ಗ್ರಾಮದ ಪತ್ನಿಶಾಂತಮ್ಮ ಸಂತೋಷ ಧರಿಮ್ಯಾಲ್ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಗ್ರಾಮದಲ್ಲಿ ಇರುವುದು ಬೇಡ, ಬೆಂಗಳೂರಿಗೆ ಹೋಗಿ ಅಲ್ಲಿಯೇ ದುಡಿದು ಬದುಕೋಣ ಎಂದು ಪತ್ನಿ ಶಾಂತಮ್ಮ ಹೇಳುತ್ತಿದ್ದಳು.ಕೋವಿಡ್ ಮುಗಿದ ಮೇಲೆ ಹೋಗೋಣ, ಈಗ ಬೇಡ ಎಂದು ಹೇಳಿದ್ದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಪತಿ ಸಂತೋಷ ಹೇಳಿಕೆ ನೀಡಿದ್ದಾರೆ.

ದಿಗ್ಗಾಂವ್ ಗ್ರಾಮದ ಶಾಂತಮ್ಮ ಅವರನ್ನು ರುದ್ನೂರಿನ ಸಂತೋಷ ಎಂಬುವವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಈದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT