ಶನಿವಾರ ಬೆಳಿಗ್ಗೆ 10.30ರ ಸುಮಾರಿಗೆ ಕುರಿ ಮೇಯಿಸಲು ಹೊಲಕ್ಕೆ ತೆರಳಿದ್ದಾಗ ಹಿಂದಿನಿಂದ ಹಂದಿ ದಾಳಿ ಮಾಡಿದೆ. ರಕ್ತದ ಮಡುವಿನಲ್ಲಿ ಈ ಬಾಲಕ ಬಿದ್ದಿರುವುದನ್ನು ಮಧ್ಯಾಹ್ನ 1ರ ಸುಮಾರಿಗೆ ಗಮನಿಸಿದರೈತರೊಬ್ಬರು ಅವರ ತಾಯಿಗೆ ವಿಷಯ ತಿಳಿಸಿದ್ದಾರೆ. ತಾಯಿ ಹಾಗೂ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ, ಟ್ರ್ಯಾಕ್ಟರ್ನಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎಂದುಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.